Homeಮುಖಪುಟಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

ಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

"ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. 70ರ ದಶಕದಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು.

- Advertisement -
- Advertisement -

ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ ಇವನ್ನು ಬಣ್ಣಿಸಲಾಗಿದೆ. ಬೆಂಗಳೂರಿನ ಬೀದಿಗಳಿಗೆ ಈ ಹೂ ಬಿಡುವ ಮರಗಳು ನೀಡುವ ಮೆರಗು ಆಕರ್ಷಕ. ತಾರಾಡಿಗರ ತನುಮನಗಳನ್ನು ತಣಿಸುವ ಟಬೂಬಿಯಾ ಮರಗಳು ಹಲವು ಬಗೆಗಳಲ್ಲಿದ್ದು, ಆಯಾ ಬಗೆಯವು ನಿರ್ದಿಷ್ಟ ಕೆಲವು ತಿಂಗಳಿನಲ್ಲಿ ಸುಂದರವಾದ ಬಣ್ಣ ಬಣ್ಣದ ಹೂವನ್ನು ಅರಳಿಸಿ ಸುತ್ತಲಿನ ಪ್ರಕೃತಿಯನ್ನು ಹಾಗೂ ನೋಡುಗರ ಮನಸ್ಸನ್ನೂ ಅರಳಿಸುತ್ತವೆ. ಈ ಹೂಗಳು ಮರಗಳ ಕೆಳಗೆ ಉದುರಿದಾಗ ಸುಂದರವಾದ ಕಾರ್ಪೆಟ್ ಹಾಸಿದಂತೆ ಕಾಣುತ್ತವೆ.

ಟಬೂಬಿಯಾ ಅವಲಾನಿಡೇ ಮರಗಳು ನವೆಂಬರ್ ತಿಂಗಳಿನಲ್ಲಿ ಮೊಟ್ಟಮೊದಲು ಗಾಢವಾದ ಗುಲಾಬಿ ಬಣ್ಣದ ಹೂಗಳನ್ನು ಅರಳಿಸಿ ಹೂಗಳ ಋತುವಿನ ಪ್ರಾರಂಭವನ್ನು ಸಾರುತ್ತವೆ. ಬೆಂಗಳೂರಿನ ವಿವಿಧೆಡೆ ಈ ಹೂಗಳ ಮರಗಳಿವೆ. ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಈ ಹೂಗಳ ಮೆರಗನ್ನು ನಾವು ಕಾಣಬಹುದಾಗಿದೆ. ಈ ವರ್ಷ ತೀವ್ರ ಸೈಕ್ಲೋನ್‌ನಿಂದಾಗಿ ಹೂವುಗಳು ಉದುರಿ ನೆಲವನ್ನು ಹೊದ್ದ ದೃಶ್ಯವೂ ಮನಮೋಹಕ.

“1908ರಲ್ಲಿ ಲಾಲ್‌ಬಾಗ್ ಕ್ಯುರೇಟರ್ ಆಗಿ ಬಂದವರು ಕ್ರುಂಬಿಗಲ್. ಅವರು ಲಾಲ್‌ಬಾಗ್‌ಗೆ ಸೀಮಿತವಾಗಿದ್ದ ಉದ್ಯಾನವನ್ನು ನಗರದ ವಿವಿಧ ಬಡಾವಣೆಗಳಿಗೆ, ಮನೆಗಳಿಗೆ ಕೊಂಡೊಯ್ದರು. ಅವರು ಈ ಸರಣಿ ಹೂ ಬಿಡುವ ಮರಗಳನ್ನು ನೆಡುವುದನ್ನು ಪ್ರಾರಂಭಿಸಿದರು. ಅಂದರೆ ಒಂದು ಜಾತಿಯ ಮರಗಳು ಹೂವರಳಿಸಿ ಬಾಡುವಷ್ಟರಲ್ಲಿ ಮತ್ತೊಂದು ಜಾತಿಯ ಮರಗಳು ಹೂವರಳಿಸಿರಬೇಕು. ಅವರು ಈ ಟಬೂಬಿಯಾ ಜಾತಿಯ ಮರಗಳನ್ನು ಸಾಕಷ್ಟು ನೆಡಲು ಪ್ರೋತ್ಸಾಹಿಸಿದರು” ಎನ್ನುತ್ತಾರೆ ತೋಟಗಾರಿಕೆ ಸಮಾಲೋಚಕ ಮತ್ತು ತಜ್ಞ ಭಕ್ತರಹಳ್ಳಿಯ ಸಂತೆ ನಾರಾಯಣಸ್ವಾಮಿ.

“ಟಬೂಬಿಯಾ ಅವಲಾನಿಡೇ ಜಾತಿಯ ಮರ ನವೆಂಬರ್, ಡಿಸೆಂಬರ್, ಜನವರಿ ತಿಂಗಳಿನಲ್ಲಿ ಗಾಢವಾದ ಗುಲಾಬಿ ಬಣ್ಣದ ಹೂಬಿಡುತ್ತದೆ. ಅದು ಮುಗಿಯುವಷ್ಟರಲ್ಲಿ ಟಬೂಬಿಯಾ ಅರ್ಜೆನ್ಷಿಯಾ ಗಾಢ ಹಳದಿ ಬಣ್ಣದ ಹೂವರಳಿಸಿಕೊಂಡು ಗಮನ ಸೆಳೆದರೆ, ಟಬೂಬಿಯಾ ಸ್ಪೆಕ್ಟಾಬಿಲಿಸ್ ತಿಳಿ ಹಳದಿ ಹೂವರಳಿಸುತ್ತವೆ. ಇವು ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇರುತ್ತವೆ. ಹಳದಿ ಹೂಗಳು ಉದುರುವ ಸಮಯಕ್ಕೆ ಸರಿಯಾಗಿ ಅಂದರೆ, ಯುಗಾದಿಗೆ ಸ್ವಾಗತ ಕೋರುವುದೇ ಟಬೂಬಿಯಾ ರೋಸಿಯಾ. ಇದರ ಸೊಬಗು ಮತ್ತು ಬೆಡಗನ್ನು ’ತಿಳಿಗುಲಾಬಿ ಸೀರೆಯನ್ನು ಧರಿಸಿರುವ ಸುಂದರಿ’ ಎಂದು ಕರೆದಿದ್ದೇನೆ. ಸುಮಾರು ಏಪ್ರಿಲ್ ತಿಂಗಳವರೆಗೂ ಇರುವ ಈ ಹೂವಿನ ನಂತರ ಕತ್ತಿಕಾಯಿ ಮರ ಅಂದರೆ ಮೇ ಫ್ಲವರ್ ಹೂ ಬಿಡುತ್ತದೆ. ಹೀಗೇ ಟ್ಯುಲಿಪ್ ಮರ ಅಥವಾ ನೀರುಗಾಯಿಮರ ಚಂದದ ಹೂ ಬಿಡುತ್ತದೆ ಹೀಗೇ ಸಾಗಿ ದಸರಾ ಮರಗಳೆಂದು ಕರೆಯುವ ಕಲ್ವಿಲೇ ರೆಸಿಮೋಸಾ ಕೇಸರಿ ಬಣ್ಣದ ಹೂಬಿಡುವವರೆಗೂ ಸಾಗುತ್ತದೆ. ಈ ದಸರಾ ಮರಗಳನ್ನು ಕ್ರುಂಬಿಗಲ್ ಅವರು ಮೈಸೂರಿನಲ್ಲಿ ನೆಟ್ಟಿದ್ದಾರೆ. ಲಿಲ್ಲಿ ಹೂವರಳಿದಾಗ ಲಂಡನ್ನಿಗೆ ಭೇಟಿ ಕೊಡು; ಟಬೂಬಿಯಾ ಹೂಬಿಟ್ಟಾಗ ಬೆಂಗಳೂರಿಗೆ ಭೇಟಿ ನೀಡು ಎಂಬ ಮಾತು ಚಾಲ್ತಿಯಲ್ಲಿದೆ” ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬಲು ಅಪರೂಪದ ಟಬೂಬಿಯಾ ಸ್ಪೆಕ್ಟಾಬಿಲಿಸ್ ಜಾತಿಯ ಮರಗಳಿವೆ. ತಿಳಿ ಹಳದಿ ಹೂವರಳಿಸುವ ಈ ಮರಗಳು ಬೆಂಗಳೂರಿನಲ್ಲಿ ಹೆಚ್ಚೆಂದರೆ ೫೦ ಇರಬಹುದು. ನಮ್ಮ ರಾಜಭವನದಲ್ಲಿ ಟಬೂಬಿಯಾ ದೊನ್ನೆಲ್ ಸ್ಮಿತಿ ಎಂಬ ಜಾತಿಯ ಮರವಿದೆ. ಗಾಢ ಹಳದಿ ಬಣ್ಣದ ಹೂಗಳನ್ನು ಬಿಡುವ ಈ ಮರದ ಕಾಂಡ ಮೃದು. ಬೆಂಗಳೂರಿನಲ್ಲಿ ಈ ಜಾತಿಯವು ಸುಮಾರು ಹತ್ತು ಮರಗಳಿರಬೇಕಷ್ಟೇ.

“ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. ೭೦ರ ದಶಕದಲ್ಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು. ಕನಿಷ್ಠ ಒಂದು ಸಾವಿರವಾದರೂ ಅಲ್ಲಿ ಟಬೂಬಿಯಾ ಮರಗಳಿವೆ. ಪ್ರತಿ ವರ್ಷ ನವೆಂಬರ್‌ನಿಂದ ಮೇ ವರೆಗೆ ಅಲ್ಲಿ ಬಣ್ಣಬಣ್ಣದ ಹೂಗಳನ್ನು ನೋಡಲು ಎರಡು ಕಣ್ಣುಗಳು ಸಾಲವು. ಅಲ್ಲಿ ಒಂದು ದಶಕ ಗಾರ್ಡನ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿದ ಅದೃಷ್ಟ ನನ್ನದು” ಎನ್ನುತ್ತಾರೆ ಸಂತೆ ನಾರಾಯಣಸ್ವಾಮಿ.

ಹೊರಗೆ ತಾರಾಡುವಾಗ ಈ ಸಂತಸ ಅರಳುವ ಸಮಯವನ್ನು ಕಣ್ಣುತುಂಬಿಸಿಕೊಳ್ಳುವುದನ್ನು ಮರೆಯದಿರಿ.

(ವಿ. ಸೂ: ಟಿ.ಪಿ.ಇಸ್ಸಾರ್ ಅವರು ಬೆಂಗಳೂರಿನ ಎಲ್ಲಾ ಹೂ ಬಿಡುವ ಮರಗಳ ಕುರಿತಾದ ಕಾಫಿ ಟೇಬಲ್ ಪುಸ್ತಕ ’ಬ್ಲಾಸಮ್ಸ್ ಆಫ್ ಬೆಂಗಳೂರು’ ಹೊರತಂದಿದ್ದಾರೆ.)

ಡಿ ಜಿ ಮಲ್ಲಿಕಾರ್ಜುನ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರ ನೆಚ್ಚಿನ ಹವ್ಯಾಸ ಫೋಟೋಗ್ರಫಿ. ರಸ್ಕಿನ್ ಬಾಂಡ್ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರಲ್ಲದೆ, ಫೋಟೋಗ್ರಪಿ ವಿಷಯವಾಗಿ ’ಕ್ಲಿಕ್, ’ಅರೆಕ್ಷಣದ ಅದೃಷ್ಟ’ ಪುಸ್ತಕಗಳನ್ನು ರಚಿಸಿದ್ದಾರೆ.

ಫೋಟೋಗಳು: ಸಂತೆ ನಾರಾಯಣಸ್ವಾಮಿ ಮತ್ತು ಮಂಜುನಾಥ ಚಾರ್ವಾಕ


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...