HomeUncategorizedಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ನಟ ರಜನಿಕಾಂತ್, ತಮಿಳುನಾಡು ಚುನಾವಣೆಗೆ ತಮ್ಮ ಪಕ್ಷದ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ಹೇಳಿದ್ದರು.

- Advertisement -
- Advertisement -

ಅನಾರೋಗ್ಯದ ಕಾರಣದಿಂದ ನಟ, ಸೂಪರ್‌ಸ್ಟಾರ್‌ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದ ತೀವ್ರ ಏರಿಳಿತದಿಂದ ಅವರನ್ನು ಶುಕ್ರವಾರ (ಡಿ.25) ಹೈದರಾಬಾದ್​​ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಅಪೊಲೋ ಆಸ್ಪತ್ರೆ ಹೆಲ್ತ್​​ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 10 ದಿನಗಳಿಂದ ಹೈದರಾಬಾದ್​​ನಲ್ಲಿ ಶೂಟಿಂಗ್​​​ನಲ್ಲಿದ್ದ ರಜನಿಕಾಂತ್ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.

ನಟ ರಜನಿಕಾಂತ್ ಅವರು ಹೈದರಾಬಾದ್‌ನಲ್ಲಿ ಕಳೆದ 10 ದಿನಗಳಿಂದ ಅಣ್ಣಾತ್ತೆ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಅಣ್ಣಾತ್ತೆ ಸಿನಿಮಾ ತಂಡದ ಎಂಟು ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ರಜನಿಕಾಂತ್‌ಗೆ ಡಿ.22 ರಂದು ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ನೆಗೆಟಿವ್ ಬಂದಿತ್ತು.

ಇದನ್ನು ಓದಿ: ಸಿದ್ದಾಂತ ಹೊಂದಿಕೆಯಾದರೆ ರಜನಿಕಾಂತ್‌ ಜೊತೆ ಮೈತ್ರಿಗೆ ಸಿದ್ದ: ಕಮಲ್ ಹಾಸನ್

ನಂತರ ತಾವೇ ಸ್ವತಃ ಹೋಂ ಕ್ವಾರಂಟೈನ್‌ನಲ್ಲಿದ್ದ ರಜನಿಕಾಂತ್‌ ಅವರನ್ನು ಅಧಿಕ ರಕ್ತದೊತ್ತಡ ಮತ್ತು ಬಳಲಿಕೆ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡದ ಸಮಸ್ಯೆ ಮತ್ತು ದೈಹಿಕ ಬಳಲಿಕೆಯ ಹೊರತಾಗಿ ಬೇರೆ ಯಾವುದೇ ಸಮಸ್ಯೆ ಇಲ್ಲ ಎಂದು ಅಪೊಲೋ ಆಸ್ಪತ್ರೆ ಹೆಲ್ತ್​​ ಬುಲೆಟಿನ್​​ನಲ್ಲಿ ಮಾಹಿತಿ ನೀಡಲಾಗಿದೆ.

ಡಿ.2 ರಂದು ‘ರಜಿನಿ ಮಕ್ಕಳ್ ಮಂದ್ರಮ್ ವೇದಿಕೆ’ಯ ಪದಾಧಿಕಾರಿಗಳನ್ನು ಭೇಟಿಯಾಗಿದ್ದ ರಜನಿಕಾಂತ್, ತಮ್ಮ ಪಕ್ಷದ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ದೃಢಪಡಿಸಿದ್ದರು. ಈ ಮೂಲಕ ತಮಿಳುನಾಡು ರಾಜಕೀಯ ಕಣದಲ್ಲಿ ಈ ಬಾರಿ ಸ್ಪರ್ಧಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ಆದರೆ, ಅದಕ್ಕೂ ಹಿಂದೆ ತಮ್ಮ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ಸೋಂಕಿನ ಭಯದಲ್ಲಿ ರಾಜಕೀಯಕ್ಕೆ ತಮ್ಮ ಪ್ರವೇಶ ವಿಳಂಬವಾಗಬಹುದು ಎಂದು ಸುಳಿವು ನೀಡಿದ್ದರು. ನಟ ರಜನಿಕಾಂತ್‌ ಅವರಿಗೆ ಮೂತ್ರಪಿಂಡದ ಸಮಸ್ಯೆ ಇರುವುದರಿಂದ ಕೊರೊನಾ ಸೋಂಕಿಗೆ ಬೇಗ ಗುರಿಯಾಗಬಹುದು ಎಂಬ ಕಾರಣಕ್ಕೆ ಪ್ರಯಾಣ ಮಾಡದಂತೆ ವೈದ್ಯರು ಸೂಚಿಸಿದ್ದರು.

ತಮಿಳುನಾಡು ಚುನಾವಣಾ ಅಖಾಡಕ್ಕೆ ಇಳಿದು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿರುವ ನಟ ಕಮಲ್ ಹಾಸನ್, ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುವುದಾಗಿ ಹಲವು ಬಾರಿ ಹೇಳಿದ್ದಾರೆ. ಸಿದ್ಧಾಂತಗಳು ಹೊಂದಿಕೆಯಾದರೇ, ಜನರಿಗೆ ನಮ್ಮ ಮೈತ್ರಿಯಿಂದ ಒಳ್ಳೆಯದಾಗುವುದಾದರೇ ನಾವು ಅಹಂ ಬಿಟ್ಟು ಒಂದಾಗುತ್ತೇವೆ ಎಂದಿದ್ದರು.

ಈಗ ರಜನಿಕಾಂತ್ ಆರೋಗ್ಯ ಸ್ಥಿತಿಯನ್ನು ನೋಡಿದರೆ ಅವರು ಮತ್ತೆ ತಮ್ಮ ಹಳೆಯ ಮಾತಾದ ರಾಜಕೀಯಕ್ಕೆ ಪ್ರವೇಶ ವಿಳಂಬವಾಗಬಹುದು ಎಂಬುದನ್ನು ಪುನರುಚ್ಚರಿಸಬಹುದು. ಈಗಾಗಲೇ ತಮಿಳುನಾಡಿನಲ್ಲಿ ಹೊಸ ಹೊಸ ಪಕ್ಷಗಳು ಹುಟ್ಟಿಕೊಂಡಿದ್ದು, ಪಕ್ಷ ಪಕ್ಷಗಳಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಬಿಜೆಪಿ ಈ ಎಲ್ಲ ವಿಚಾರಗಳ ಲಾಭ ಪಡೆಯಲು ತನ್ನದೆ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಿದೆ.


ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...