Homeಮುಖಪುಟದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ಕೇರಳದಲ್ಲಿ ಇತ್ತೀಚೆಗಷ್ಟೇ ಸ್ಥಳೀಯ ಚುನಾವಣೆ ನಡೆದಿದ್ದು, ಎಡಪಕ್ಷಗಳ ಒಕ್ಕೂಟ(LDF) ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದೆ.

- Advertisement -
- Advertisement -

ಪ್ರಧಾನಿಯಿಂದ ಹಿಡಿದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕು 60-70 ವರ್ಷದ ದಾಟಿದ ಹಿರಿಯರೇ ಆಗಿದ್ದಾರೆ. ಯುವಜನರು ಅಧಿಕಾರದ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಕೊರಗು ನಿವಾರಿಸುವ ಸುದ್ದಿಯೊಂದು ಹೊರಬಿದ್ದಿದೆ. ತಿರುವನಂದಪುರಂ ಕಾರ್ಪೋರೇಷನ್‌‌ ಮೇಯರ್‌ ಆಗಿ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ(ಮಾರ್ಕ್ಸ್‌‌ವಾದಿ) ಪಕ್ಷದ ’ಆರ್ಯ ರಾಜೇಂದ್ರನ್’ ಆಯ್ಕೆಯಾಗಿದ್ದು, ಈ ಮೂಲಕ ಭಾರತದ ಅತೀ ಕಿರಿಯ ಮೇಯರ್ ಆಗಿ‌  ಹೊರಹೊಮ್ಮಿದ್ದಾರೆ. ಕೇರಳದಲ್ಲಿ ಇತ್ತೀಚೆಗಷ್ಟೇ ಸ್ಥಳೀಯ ಚುನಾವಣೆ ನಡೆದಿದ್ದು ಎಡಪಕ್ಷಗಳ ಒಕ್ಕೂಟ(LDF) ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದೆ.

ಇತ್ತೀಚೆಗಿನ ಚುನಾವಣೆಯಲ್ಲಿ 21 ವರ್ಷದ ಆರ್ಯ ರಾಜೇಂದ್ರನ್ ತಿರುವನಂದಪುರಂ ಕಾರ್ಪೋರೇಷನ್‌ನ ಮುದವನ್ಮುಗಲ್ ವಾರ್ಡ್ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದರು. ಅವರು ಎಸ್‌ಎಫ್‌ಐ ಕೇರಳ ರಾಜ್ಯ ಸಮಿತಿ ಸದಸ್ಯೆಯಾಗಿದ್ದು ಮತ್ತು ’ಬಾಲಸಂಗಂ ಕೇರಳ ರಾಜ್ಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ಕೇರಳ: ಪುರಸಭೆ ಕಚೇರಿಯಲ್ಲಿ ’ಜೈಶ್ರೀರಾಮ್’ ಬ್ಯಾನರ್‌ ವಿರುದ್ದ ರಾಷ್ಟ್ರಧ್ವಜ ಹಾರಿಸಿದ ಡಿವೈಎಫ್‌ಐ!

ಒಟ್ಟು 100 ಸ್ಥಾನಗಳ ತಿರುವನಂದಪುರಂ ಕಾರ್ಪೋರೇಷನ್‌ನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌‌ವಾದಿ) ನೇತೃತ್ವದ LDF ಒಕ್ಕೂಟ ಒಟ್ಟು 52 ಸ್ಥಾನಗಳ ಸ್ಪಷ್ಟ ಬಹುಮತವನ್ನು ಹೊಂದಿದೆ. ಆರ್ಯ ರಾಜೇಂದ್ರನ್ ಪ್ರಸ್ತುತ ಆಲ್ ಸೇಂಟ್ಸ್ ಕಾಲೇಜಿನ ಬಿಎಸ್ಸಿ ಗಣಿತ ವಿದ್ಯಾರ್ಥಿನಿ ಆಗಿದ್ದಾರೆ. ಅವರ ತಂದೆ ರಾಜೇಂದ್ರನ್ ಎಲೆಕ್ಟ್ರಿಷಿಯನ್ ಆಗಿದ್ದು, ತಾಯಿ ಶ್ರೀಲತಾ ಎಲ್ಐಸಿ ಏಜೆಂಟ್ ಆಗಿದ್ದಾರೆ.

ಇತ್ತೀಚೆಗಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಒಟ್ಟು 941 ಗಳಲ್ಲಿ 514 ಗ್ರಾಮ ಪಂಚಾಯಿತಿಗಳನ್ನು ಗೆದ್ದಿತ್ತು. ಒಟ್ಟು 152 ತಾಲೂಕು ಪಂಚಾಯತ್‌‌ನಲ್ಲಿ 107, 14 ಜಿಲ್ಲಾ ಪಂಚಾಯತ್‌ನಲ್ಲಿ 10, ಹಾಗೂ 6 ಕಾರ್ಪೋರೇಷನ್‌ಗಳಲ್ಲಿ 3 ಎಲ್‌ಡಿಎಫ್‌ ಪಾಲಾಗಿದ್ದವು.

ಇದನ್ನೂ ಓದಿ: ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...