HomeಮುಖಪುಟPM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರ ಸ್ಥಾಪಿಸಿದೆ. ಆದರೆ, ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಪರಿಹಾರ ನಿಧಿ ಸಂಗ್ರಹಿಸಲೆಂದು ಸರ್ಕಾರ PM-CARES ಸ್ಥಾಪಿಸಿದೆ. ಹಾಗಾಗಿ ಅದೊಂದು ಸರ್ಕಾರಿ ಟ್ರಸ್ಟ್ ಆಗಿದೆ. ಆದರೆ ಆರ್‌ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೊಸ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರ ತನ್ನ ವೆಬ್‌ಸೈಟ್‌ನಲ್ಲಿ ಖಾಸಗಿ ಎಂದು ಬರೆದುಕೊಂಡಿದ್ದನ್ನು ಪ್ರಶ್ನಿಸಿದ ಹೊಸ ಆರ್‌ಟಿಐ ಅರ್ಜಿಗೆ ಉತ್ತರಿಸುವಾಗ ಅದು ಉಲ್ಟಾ ಹೊಡೆದಿದೆ. ಖಾಸಗಿ ಮಾಧ್ಯಮ ಸಂಸ್ಥೆ ಸಲ್ಲಿಸಿರುವ ಆರ್‌ಟಿಐಗೆ ನೀಡಿರುವ ಪ್ರತ್ಯುತ್ತರದಲ್ಲಿ, PM-CARES “ಭಾರತ ಸರ್ಕಾರದ ಒಡೆತನದಲ್ಲಿದೆ, ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ” ಎಂದು ಹೇಳಿದೆ.

ಆದರೆ, PM-CARES ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಸಮರ್ಥನೆ ನೀಡಿದೆ.

ಡಿಸೆಂಬರ್‌ 24 ರ ಆರ್‌ಟಿಐಗೆ ಉತ್ತರ ನೀಡಿರುವ ಟ್ರಸ್ಟ್, ’ ಈ ನಿಧಿಗೆ ವ್ಯಯಕ್ತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ವಿದೇಶಿ ವ್ಯಕ್ತಿಗಳು, ವಿದೇಶಿ ಸಂಸ್ಥೆಗಳು ಸಂಪೂರ್ಣವಾಗಿ ದೇಣಿಗೆ, ಹಣಕಾಸು ಒದಗಿಸುತ್ತದೆ. ಈ ನಿಧಿಗೆ ಸರ್ಕಾರ ಹಣಕಾಸು ಒದಗಿಸುವುದಿಲ್ಲ. ಹೀಗಾಗಿ ಖಾಸಗಿ ವ್ಯಕ್ತಿಗಳು ಇದರ ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 2 (h) ಪ್ರಕಾರ ಈ ನಿಧಿಯನ್ನು ಸಾರ್ವಜನಿಕ ಪ್ರಾಧಿಕಾರವೆಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ಹೇಳುವುದಿಲ್ಲ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದ್ದು, ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR)ಯ  ಅರ್ಹತೆ ಇರುವ ಜ್ಞಾಪಕ ಪತ್ರವನ್ನು PM-CARESಗೆ ನೀಡಿತ್ತು.

ಪಿಎಂ ಕೇರ್ಸ್‌‌ನ ಅಧಿಕೃತ ದಾಖಲೆಗಳಲ್ಲಿ ವಿರೋಧಾಭಾಸವು ಹೊರಹೊಮ್ಮಿದ ನಂತರ ನಿಧಿಯ ಬಗೆಗಿನ ಗೊಂದಲ ಹೆಚ್ಚಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯನ್ನು ಬಳಸುವ ಸಲುವಾಗಿ ವಿವಿಧ ದಾನಿಗಳಿಂದ ದೇಣಿಗೆ ಪಡೆಯುವ ಸರ್ಕಾರಿ ಘಟಕವೆಂದು ಪಿಎಂ ಕೇರ್ಸ್ ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಬಗ್ಗೆ ಟ್ರಸ್ಟ್ ಹೇಳುವ ವಿಚಾರಕ್ಕೂ, ಸರ್ಕಾರ ನೀಡುವ ಉತ್ತರಕ್ಕೂ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗ ಇದು ಸಾರ್ವಜನಿಕ ನಿಧಿ ಎಂದು ಹೇಳುತ್ತಲೇ ಮಾಹಿತಿ ಹಕ್ಕನ್ನೂ ನಿರಾಕರಿಸಿದೆ. ಇದು ಮೊದಲೇನು ಅಲ್ಲ, ಕೋಟ್ಯಾಂತರ ರೂಪಾಯಿ ಹರಿದು ಬಂದಿರುವ ಪಿಎಂ ಕೇರ್ಸ್ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಟ್ಟು ಕೊಡುತ್ತಿಲ್ಲ.

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಪ್ರತಿ ಬಾರಿಯೂ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪಿಎಂಒ ಕಚೇರಿ ಹೇಳುತ್ತಲೇ ಇದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...