Homeಮುಖಪುಟಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಮುಸ್ಲಿಂ ಸಮುದಾಯದ ಯುವಕ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ, ಮತಾಂತರ ಮಾಡಲು ಯತ್ನಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

- Advertisement -
- Advertisement -

ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಹದಿ ಹರೆಯದ ಯುವಕ ಮತ್ತು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿ, ಯುವಕನನ್ನು ಹೊಸ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

16 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯದ ಯುವಕನೊರ್ವ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ ಬಾಲಕಿಯನ್ನು ಮತಾಂತರ ಮಾಡಲು ಯತ್ನಿಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

ಬಾಲಕಿಯ ತಂದೆ ನೀಡಿರುವ ಸುಳ್ಳು ದೂರಿನ ಆಧಾರದಲ್ಲಿ ಯುವಕನನ್ನು ಡಿಸೆಂಬರ್ 15 ರಂದು ಪೊಲೀಸರು ಬಂಧಿಸಿದ್ದಾರೆ. ಯುವಕನಿಗೆ ಕಿರುಕುಳ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಕಾನೂನು ಜಾರಿಗೆ ಬಂದಾಗಿನಿಂದ ಹಲವು ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ಬಾಲಕಿಯ ಹಳ್ಳಿಗೆ ಹೋದ ಪತ್ರಕರ್ತರಿಗೆ ಬಾಲಕಿ ಮತ್ತು ಬಾಲಕಿಯ ತಾಯಿ ಇದು ಲವ್‌ ಜಿಹಾದ್ ಪ್ರಕರಣ ಅಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ನಮ್ಮ ಮಗಳನ್ನು ಮನೆಗೆ ಬಿಡಲು ಆ ಯುವಕ ಜೊತೆಯಲ್ಲಿ ಬರುತ್ತಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ರಾತ್ರಿ 11.30 ರ ಸುಮಾರಿಗೆ ದಾರಿಯಲ್ಲಿ ಕೆಲವರು ನಮ್ಮನ್ನು ಹಿಡಿದು ಥಳಿಸಿದರು. ಅವರು ಹಿಡಿದುಕೊಂಡು ಹೋಗಿರುವ ಆ ಹುಡುಗ ಯಾರು ಎಂಬುದೂ ನನಗೆ ತಿಳಿದಿರಲಿಲ್ಲ. ಅವರು ನನ್ನನ್ನು ಮತಾಂತರಗೊಳಿಸಲು ಯತ್ನಿಸಿದ್ದು ಸುಳ್ಳು” ಎಂದು ಬಾಲಕಿ ಎನ್‌ಡಿಟಿವಿಗೆ ನೀಡಿದ ಸಂಕ್ಷಿಪ್ತ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತ ಬಾಲಕಿಯ ತಾಯಿ ಕೂಡ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, “ಆಕೆ ಹುಟ್ಟುಹಬ್ಬದ ಕಾರ್ಯಕ್ರಮದಿಂದ ಹಿಂತಿರುಗುತಿದ್ದಳು. ಆ ಹುಡುಗ ಅವಳನ್ನು ಮನೆಗೆ ಬಿಡುವುದಾಗಿ ಹೇಳಿ, ಕರೆದುಕೊಂಡು ಬರುತ್ತಿದ್ದನು. ಆ ಸಂದರ್ಭದಲ್ಲಿ ಗ್ರಾಮದ ಯುವಕರ ಗುಂಪು ಅವರನ್ನು ಹಿಡಿದಿದ್ದಾರೆ. ಆಕೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದು ಹೇಳಿದರೂ ಯಾರು ಆಕೆಯ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಬಾಲಕಿಯ ಗ್ರಾಮಸ್ಥರು ಕೂಡ ಬಾಲಕಿ ಮತ್ತು ಆಕೆಯ ತಾಯಿಯ ಮಾತನ್ನೇ ಬೆಂಬಲಿಸಿದ್ದಾರೆ. “ಪೊಲೀಸರು ಪ್ರಕರಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿರಬೇಕು. ಇಲ್ಲಿ ಯಾವುದೇ ಲವ್ ಜಿಹಾದ್ ಪ್ರಕರಣ ನಡೆದಿಲ್ಲ. ಬಾಲಕಿ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಳು ಎಂದು ಗ್ರಾಮದ ಮುಖಂಡ ವಿನೋದ್ ಸೈನಿ ಹೇಳಿದ್ದಾರೆ.

ಯುವಕನ ತಾಯಿ ಕೂಡ ’ನನ್ನ ಮಗ ಹುಟ್ಟು ಹಬ್ಬಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದ, ಮರುದಿನ ಬೆಳಗ್ಗೆ ಆತ ಪೊಲೀಸ್ ಠಾಣೆಯಲ್ಲಿದ್ದ. ಆತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಮಾತ್ರ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. “ಕೆಲವು ದಿನಗಳಿಂದ ಬಾಲಕಿ ಕಾಣೆಯಾಗಿದ್ದರು. ಆ ಹುಡುಗನು ಸೋನು ಎಂಬ ಹಿಂದೂ ಹೆಸರಿನಿಂದ ಆಕೆಯನ್ನು ಪರಿಚಯ ಮಾಡಿಕೊಂಡು, ಮತಾಂತರಗೊಳಿಸುವ ಉದ್ದೇಶದಿಂದ ಓಡಿಹೋಗುವಂತೆ ಆಕೆಯನ್ನು ಒತ್ತಾಯಿಸಿದ್ದನು. ಆದರೆ, ಆಕೆ ತಪ್ಪಿಸಿಕೊಂಡು ಬಂದಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬಿಜ್ನೋರ್‌ನ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...