Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...