Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...