Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...