Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...