Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...