Homeಚಳವಳಿಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ - ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ – ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ರೈತ ಸಂಘದ ಹತ್ತು ಜನ ಸಾಮಾನ್ಯ ಕಾರ್ಯಕರ್ತರನ್ನು ಮಾತುಕತೆಗೆ ಕಳಿಸುತ್ತೇವೆ. ತಾಕತ್ತು ಇದ್ದರೆ ಪ್ರಧಾನಿ ಮುಖಾಮುಖಿ ಆಗಲಿ ಎಂದು ಅವರು ಸವಾಲು ಹಾಕಿದ್ದಾರೆ

- Advertisement -
- Advertisement -

ಪ್ರಧಾನಿ ಮೋದಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ ಎನ್ನುವುದು ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳಿಂದ ಸಾಬೀತಾಗಿದೆ. ಸತತ ಸುಳ್ಳುಗಳಿಂದ ಜನರನ್ನು ಹಾದಿ ತಪ್ಪಿಸುವುದು ಅವರಿಗೆ ರೂಡಿಯಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಶುಕ್ರವಾರ ದೆಹಲಿಯಲ್ಲಿ ಆರೋಪಿಸಿದ್ದಾರೆ.

ದೆಹಲಿ ಕರ್ನಾಟಕ ಸಂಘದ ಆವರಣದಲ್ಲಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಲು ಆಗಮಿಸಿದ ನಿಯೋಗ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೊರೊನಾ ಎಂದು ಮನೆಯಲ್ಲಿ ಕೂಡಿ ಹಾಕಿ ರೈತರ ಕತ್ತು ಹಿಸುಕುವ ಮೂರು ಕಾನೂನನ್ನು ಜಾರಿಗೆ ತಂದ್ದಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಅವಮಾನಿಸಿ ಕೆಲವರ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

“ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿಯಿದ್ದದ್ದೆ ಆದಲ್ಲಿ ರೈತ ಸಂಘದ ಹತ್ತು ಜನ ಸಾಮಾನ್ಯ ಕಾರ್ಯಕರ್ತರನ್ನು ಮಾತುಕತೆಗೆ ಕಳಿಸುತ್ತೇವೆ. ತಾಕತ್ತು ಇದ್ದರೆ ಪ್ರಧಾನಿ ಮುಖಾಮುಖಿ ಆಗಲಿ” ಎಂದು ನಾಗೇಂದ್ರ ಅವರು ಸವಾಲು ಹಾಕಿದ್ದಾರೆ.

ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, “ಹಾಲಿ ಇರುವ ಸರ್ಕಾರ ರೈತ ವಿರೋಧಿಯಲ್ಲ. ರೈತ ದ್ರೋಹಿ ಸರ್ಕಾರ. ರೈತರು ಕೇಳದೆ ಇರುವಂತ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ಈ ಕಾನೂನು ತಿದ್ದುಪಡಿಯಿಂದ ಕೇವಲ ರೈತರಿಗೆ ಮಾತ್ರ ಅನ್ಯಾಯ ಆಗುವುದಲ್ಲ. ದಲಿತ, ಕಾರ್ಮಿಕ ಸೇರಿದಂತೆ ಗ್ರಾಹಕರಿಗೂ ಘೋರ ಅನ್ಯಾಯವಾಗಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಕರ್ನಾಟಕ ಜನ ಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ದಕ್ಷಿಣ ಭಾರತದ ರೈತರಿಗೆ ಈಗ ಸುಗ್ಗಿಯ ಕಾಲ. ಹೀಗಾಗಿ ಈ ಕಾಯ್ದೆಯ ವಿರುದ್ದದ ಹೋರಾಟ ಬಿರುಸುಗೊಂಡಿಲ್ಲ. ಸುಗ್ಗಿ ಮುಗಿದ ನಂತರ ಮಾಡುವ ಸುಗ್ಗಿ ಹಬ್ಬವನ್ನು ಹೋರಾಟದ ದಿನವನ್ನಾಗಿ ಆಚರಿಸಲಾಗುವುದು ಹಾಗೂ ಜನವರಿ 26 ದೇಶದ ರೈತರು, ದಲಿತರು, ಕಾರ್ಮಿಕರು ದೆಹಲಿ ಮುತ್ತಿಗೆ ಹಾಕುವ ಸಂದರ್ಭ ಬರುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುಪ್ರಸಾದ್ ಕೆರೆಗೋಡು, ಎಸ್. ಆರ್. ಹಿರೇಮಠ್, ಕಾಳಪ್ಪ, ಜಿ.ಜಿ ಹಳ್ಳಿ ನಾರಾಯಣಸ್ವಾಮಿ, ಬಿ.ಆರ್ ಪಾಟೀಲ್, ಅಪರ್ಣ, ನಾಗಮ್ಮ ಮತ್ತಿತರರು ಹಾಜರಿದ್ದರು. ಸುದ್ದಿಗೋಷ್ಠಿಯ ನಂತರ ನಿಯೋಗವು ಹರಿಯಾಣ ರಾಜಾಸ್ಥಾನ ದೆಹಲಿಯ ಗಡಿಯಾಗಿರುವ ಷಹಜಾನ್ ಪುರದಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಕ್ಕೆ ಬೇಟಿಯಿತ್ತು ಅಲ್ಲಿನ ಮುಖಂಡರೊಂದಿಗೆ ಚರ್ಚೆ ನಡೆಸಿತು. ಶನಿವಾರ ನಿಯೋಗವು ದೆಹಲಿ ಸಮೀಪದ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ಸ್ಥಳಕ್ಕೆ ಬೇಟಿಯಿತ್ತು ಹೊರಾಟದಲ್ಲಿ ಭಾಗಿಯಾಗಲಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...