Homeಮುಖಪುಟತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು.

- Advertisement -
- Advertisement -

ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ ಪ್ರಕರಣದಲ್ಲಿ ಚೀನಾದ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರನ್ನು ತೆಲಂಗಾಣದ ಸೈಬರಾಬಾದ್‌‌ನಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಯ ನೇತೃತ್ವದಲ್ಲಿ ನಡೆಯುತ್ತಿದ್ದ “ಕ್ಯೂಬೆವೊ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್” (ಸ್ಕೈಲೈನ್) ಎಂಬ ಕಾಲ್ ಸೆಂಟರ್‌ ಮೇಲೆ ಸೈಬರಾಬಾದ್‌ನ ಸೈಬರ್‌ ಅಪರಾಧ ಪೊಲೀಸರು ದಾಳಿ ನಡೆಸಿದ್ದರು.

ಇದರ ಮುಖ್ಯ ಕಚೇರಿ “ಸ್ಕೈಲೈನ್ ಇನ್ನೋವೇಶನ್ಸ್ ಟೆಕ್ನಾಲಜೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿದ್ದು, ದೆಹಲಿಯಲ್ಲಿದೆ. ಜಿಕ್ಸಿಯಾ ಜಾಂಗ್ ಮತ್ತು ಉಮಾಪತಿ ಅಜಯ್ ಎಂಬವರು ಇದರ ನಿರ್ದೇಶಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಆರ್‌ಬಿಐ ನಡುವಿನ ಸಂಘರ್ಷ

ಇವರು ಒಟ್ಟು 11 ರೀತಿಯ ತ್ವರಿತ ಸಾಲಗಳನ್ನು ನೀಡುತ್ತಿದ್ದು, ಭಾರಿ ಮರುಪಾವತಿಯನ್ನು ಪಡೆಯುತ್ತಿದ್ದರು. ಸಾಲ ಪಾವತಿಸದ ಸಾಲಗಾರರಿಗೆ ತಾವು ನಡೆಸುತ್ತಿದ್ದ ಕಾಲ್ ಸೆಂಟರ್‌ಗಳ ಮೂಲಕ ವ್ಯವಸ್ಥಿತವಾಗಿ ನಿಂದನೆ, ಕಿರುಕುಳ, ಬೆದರಿಕೆಗಳನ್ನು ಹಾಕುತ್ತಿದ್ದರು. ಅಲ್ಲದೆ ಸಾಲ ಪಡೆದವರ ಸಂಬಂಧಿಕರು ಮತ್ತು ಕುಟುಂಬ ಸದಸ್ಯರಿಗೆ ನಕಲಿ ಕಾನೂನು ನೋಟಿಸ್ ಕಳುಹಿಸಿ ಸಾಲಗಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ತಮ್ಮ ಸಾಲ ನೀಡುವ ಅಪ್ಲಿಕೇಷನ್‌ ಅನ್ನು ಸಾಲಗಾರರ ಸಂಪರ್ಕದಲ್ಲಿರುವವರ ಫೋನ್ ಸಂಖ್ಯೆ ಸೇರಿದಂತೆ ಇತರ ಮೊಬೈಲ್ ಮಾಹಿತಿಗಳನ್ನು ಕೂಡಾ ಪಡೆಯುವಂತೆ ಅಭಿವೃದ್ದಿಪಡಿಸಿದ್ದರು. ಅಲ್ಲದೆ ಇದು ಗ್ರಾಹಕರ ಐಡಿ ಪ್ರೂಫ್‌‌, ಪ್ಯಾನ್ ಕಾರ್ಡ್, ಕೆವೈಸಿ ದಾಖಲೆ, ಬ್ಯಾಂಕ್ ಖಾತೆಗಳು ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸುತ್ತದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ಆರೋಪಿಗಳು ಸಾಲಗಾರರಿಂದ ಮರುಪಾವತಿಗಾಗಿ ದೇಶದ ವಿವಿಧ ಭಾಗಗಳಲ್ಲಿ ಇನ್ನೂ ನಾಲ್ಕು ಕಾಲ್ ಸೆಂಟರ್‌ಗಳನ್ನು ಸ್ಥಾಪಿಸಿದ್ದಾರೆ. ಅವುಗಳ ಪಟ್ಟಿ ಹೀಗಿದೆ, ಗೋವಾದಲ್ಲಿ ನೋಂದಾಯಿಸಿದ ಆದರೆ ಗುರ್‌ಗಾಂವ್‌ನಲ್ಲಿರುವ ಟೋಪ್‌ಫನ್ ಟೆಕ್ನೋಲಜಿ ‌ಪ್ರೈ.ಲಿ ಮತ್ತು ಫಾಸ್‌ಮೆಟ್ ಟೆಕ್ನೋಲಜಿ ಪ್ರೈ.ಲಿ, ಹಾಗೂ ಹೈದರಾಬಾದ್‌ನಲ್ಲಿರುವ ಕ್ಯೂಬೆವೊ ಟೆಕ್ನಾಲಜಿ ಪ್ರೈ.ಲಿ ಮತ್ತು ಬೆಸ್ಟ್ ಶೈನ್ ಟೆಕ್ನೋಲಜಿ ಪ್ರೈ.ಲಿ. ಇಷ್ಟೇ ಅಲ್ಲದೆ ದಕ್ಷಿಣ ಭಾರತದಲ್ಲೂ ಇವರಿಗೆ ಕಾಲ್‌ಸೆಂಟರ್‌ಗಳಿವೆ ಎನ್ನಾಗಿದೆ.

ಇತ್ತೀಗಷ್ಟೆ ತ್ವರಿತ ಮತ್ತು ಯಾವುದೆ ಕಿರಿಕಿರಿಯಿಲ್ಲದ ಪ್ರಕ್ರಿಯೆಯ ಮೂಲಕ ಸಾಲ ನೀಡುತ್ತೆವೆಂದು ಭರವಸೆ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ ಅಥವಾ ಮೊಬೈಲ್ ಅಪ್ಲಿಕೇಶನ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿತ್ತು. ಆರ್‌ಬಿಐ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತ್ವರಿತ ಸಾಲ ಪಡೆಯುವ ಪ್ರಕ್ರಿಯೆಯಲ್ಲಿ ಜನರು ಡಿಜಿಟಲ್ ಲೆಂಡಿಂಗ್ ಹಗರಣಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...