Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...