Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...