Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...