Homeಕರ್ನಾಟಕರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ಎಲ್ಲಿಯೂ ನೇರವಾಗಿ ಮಾತನಾಡದ ಕುಮಾರಸ್ವಾಮಿಯವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

- Advertisement -
- Advertisement -

ಎಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಜೆಡಿಎಸ್‌ಗಿಂತ ಬಿಜೆಪಿ ಮುಖಂಡರೇ ಹೆಚ್ಚಿನ ಸಂಖ್ಯೆಯಲ್ಲಿ ಟ್ವೀಟ್ ಮಾಡಿ ಶುಭ ಹಾರೈಸಿದ್ದರು. ಖುದ್ದು ನರೇಂದ್ರ ಮೋದಿಯೇ ಟ್ವೀಟ್ ಮಾಡಿದ್ದರು. ನಂತರ ಜೆಡಿಎಸ್‌ ಪಕ್ಷ ಬಿಜೆಪಿಯಲ್ಲಿ ವಿಲೀನಗೊಳ್ಳುತ್ತದೆ ಎಂಬ ವದಂತಿಗಳು ಹರಡಿದ್ದವು. ಆದರೆ ಅದೆಲ್ಲವನ್ನು ನಯವಾಗಿ ನಿರಾಕರಿಸಿದ್ದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಬಹಿರಂಗವಾಗಿ ನರೇಂದ್ರ ಮೋದಿ ಪರ ಬ್ಯಾಟ್ ಬೀಸಲು ಅಖಾಡಕ್ಕಿಳಿದಿದ್ದಾರೆ.

ಇಂದು ಟ್ವೀಟ್‌ ಮಾಡಿರುವ ಕುಮಾರಸ್ವಾಮಿಯವರು, “ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ” ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದ ಎಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ನಂತರ ನಿಧಾನವಾಗಿ ಅದರಿಂದ ಹಿಂದೆ ಸರಿದಿತ್ತು. ಅಲ್ಲದೆ ಭೂಸುಧಾರಣಾ ತಿದ್ದುಪಡಿಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪರವಾಗಿ ಮತ ಹಾಕಿ ಟೀಕೆಗೆ ಒಳಗಾಗಿತ್ತು. ಈಗ ಸರಣಿ ಟ್ವೀಟ್‌ಗಳಲ್ಲಿ ಕುಮಾರಸ್ವಾಮಿಯವರು ನಯವಾಗಿ ಮೋದಿ ಪರ ನಿಲುವು ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ, ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಮುಂದುವರೆದು ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಎಲ್ಲಿಯೂ ನೇರವಾಗಿ ಮಾತನಾಡದ ಅವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕುಮಾರಸ್ವಾಮಿಯವರ ಈ ನಡೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಈ ಅಭಿಪ್ರಾಯ ಅತ್ಯಂತ ದುರದೃಷ್ಟಕರ. ಈ ಕಾಯಿದೆ ಪರವಾದ ವಕಾಲತ್ತು ರೈತರ ಹಿತಕ್ಕಿಂತ ನಿಮ್ಮ ರಾಜಕೀಯ ಹಿತಾಸಕ್ತಿಯೇ ಮುಖ್ಯ ಎನ್ನುವದನ್ನು ಸಾಬೀತುಪಡಿಸಿದಿರಿ! ನಿಮ್ಮ ಪಕ್ಷದ ಚಿಹ್ನೆಯನ್ನು ಹೊರೆಹೊತ್ತ ರೈತ ಮಹಿಳೆಯಿಂದ ಕಮಲ ಹೊತ್ತ ಅದಾನಿ ಮಾಡಿ! ರಾಜಕೀಯವಾಗಿ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಯಶವಂತ್ ಪಿ.ಎನ್‌ರವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...