Homeಕರ್ನಾಟಕರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ಎಲ್ಲಿಯೂ ನೇರವಾಗಿ ಮಾತನಾಡದ ಕುಮಾರಸ್ವಾಮಿಯವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

- Advertisement -
- Advertisement -

ಎಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಜೆಡಿಎಸ್‌ಗಿಂತ ಬಿಜೆಪಿ ಮುಖಂಡರೇ ಹೆಚ್ಚಿನ ಸಂಖ್ಯೆಯಲ್ಲಿ ಟ್ವೀಟ್ ಮಾಡಿ ಶುಭ ಹಾರೈಸಿದ್ದರು. ಖುದ್ದು ನರೇಂದ್ರ ಮೋದಿಯೇ ಟ್ವೀಟ್ ಮಾಡಿದ್ದರು. ನಂತರ ಜೆಡಿಎಸ್‌ ಪಕ್ಷ ಬಿಜೆಪಿಯಲ್ಲಿ ವಿಲೀನಗೊಳ್ಳುತ್ತದೆ ಎಂಬ ವದಂತಿಗಳು ಹರಡಿದ್ದವು. ಆದರೆ ಅದೆಲ್ಲವನ್ನು ನಯವಾಗಿ ನಿರಾಕರಿಸಿದ್ದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಬಹಿರಂಗವಾಗಿ ನರೇಂದ್ರ ಮೋದಿ ಪರ ಬ್ಯಾಟ್ ಬೀಸಲು ಅಖಾಡಕ್ಕಿಳಿದಿದ್ದಾರೆ.

ಇಂದು ಟ್ವೀಟ್‌ ಮಾಡಿರುವ ಕುಮಾರಸ್ವಾಮಿಯವರು, “ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ” ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದ ಎಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ನಂತರ ನಿಧಾನವಾಗಿ ಅದರಿಂದ ಹಿಂದೆ ಸರಿದಿತ್ತು. ಅಲ್ಲದೆ ಭೂಸುಧಾರಣಾ ತಿದ್ದುಪಡಿಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪರವಾಗಿ ಮತ ಹಾಕಿ ಟೀಕೆಗೆ ಒಳಗಾಗಿತ್ತು. ಈಗ ಸರಣಿ ಟ್ವೀಟ್‌ಗಳಲ್ಲಿ ಕುಮಾರಸ್ವಾಮಿಯವರು ನಯವಾಗಿ ಮೋದಿ ಪರ ನಿಲುವು ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ, ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಮುಂದುವರೆದು ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಎಲ್ಲಿಯೂ ನೇರವಾಗಿ ಮಾತನಾಡದ ಅವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕುಮಾರಸ್ವಾಮಿಯವರ ಈ ನಡೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಈ ಅಭಿಪ್ರಾಯ ಅತ್ಯಂತ ದುರದೃಷ್ಟಕರ. ಈ ಕಾಯಿದೆ ಪರವಾದ ವಕಾಲತ್ತು ರೈತರ ಹಿತಕ್ಕಿಂತ ನಿಮ್ಮ ರಾಜಕೀಯ ಹಿತಾಸಕ್ತಿಯೇ ಮುಖ್ಯ ಎನ್ನುವದನ್ನು ಸಾಬೀತುಪಡಿಸಿದಿರಿ! ನಿಮ್ಮ ಪಕ್ಷದ ಚಿಹ್ನೆಯನ್ನು ಹೊರೆಹೊತ್ತ ರೈತ ಮಹಿಳೆಯಿಂದ ಕಮಲ ಹೊತ್ತ ಅದಾನಿ ಮಾಡಿ! ರಾಜಕೀಯವಾಗಿ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಯಶವಂತ್ ಪಿ.ಎನ್‌ರವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...