Homeಕರ್ನಾಟಕರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ಎಲ್ಲಿಯೂ ನೇರವಾಗಿ ಮಾತನಾಡದ ಕುಮಾರಸ್ವಾಮಿಯವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

- Advertisement -
- Advertisement -

ಎಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಜೆಡಿಎಸ್‌ಗಿಂತ ಬಿಜೆಪಿ ಮುಖಂಡರೇ ಹೆಚ್ಚಿನ ಸಂಖ್ಯೆಯಲ್ಲಿ ಟ್ವೀಟ್ ಮಾಡಿ ಶುಭ ಹಾರೈಸಿದ್ದರು. ಖುದ್ದು ನರೇಂದ್ರ ಮೋದಿಯೇ ಟ್ವೀಟ್ ಮಾಡಿದ್ದರು. ನಂತರ ಜೆಡಿಎಸ್‌ ಪಕ್ಷ ಬಿಜೆಪಿಯಲ್ಲಿ ವಿಲೀನಗೊಳ್ಳುತ್ತದೆ ಎಂಬ ವದಂತಿಗಳು ಹರಡಿದ್ದವು. ಆದರೆ ಅದೆಲ್ಲವನ್ನು ನಯವಾಗಿ ನಿರಾಕರಿಸಿದ್ದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಬಹಿರಂಗವಾಗಿ ನರೇಂದ್ರ ಮೋದಿ ಪರ ಬ್ಯಾಟ್ ಬೀಸಲು ಅಖಾಡಕ್ಕಿಳಿದಿದ್ದಾರೆ.

ಇಂದು ಟ್ವೀಟ್‌ ಮಾಡಿರುವ ಕುಮಾರಸ್ವಾಮಿಯವರು, “ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ” ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದ ಎಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ನಂತರ ನಿಧಾನವಾಗಿ ಅದರಿಂದ ಹಿಂದೆ ಸರಿದಿತ್ತು. ಅಲ್ಲದೆ ಭೂಸುಧಾರಣಾ ತಿದ್ದುಪಡಿಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪರವಾಗಿ ಮತ ಹಾಕಿ ಟೀಕೆಗೆ ಒಳಗಾಗಿತ್ತು. ಈಗ ಸರಣಿ ಟ್ವೀಟ್‌ಗಳಲ್ಲಿ ಕುಮಾರಸ್ವಾಮಿಯವರು ನಯವಾಗಿ ಮೋದಿ ಪರ ನಿಲುವು ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ, ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಮುಂದುವರೆದು ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಎಲ್ಲಿಯೂ ನೇರವಾಗಿ ಮಾತನಾಡದ ಅವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕುಮಾರಸ್ವಾಮಿಯವರ ಈ ನಡೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಈ ಅಭಿಪ್ರಾಯ ಅತ್ಯಂತ ದುರದೃಷ್ಟಕರ. ಈ ಕಾಯಿದೆ ಪರವಾದ ವಕಾಲತ್ತು ರೈತರ ಹಿತಕ್ಕಿಂತ ನಿಮ್ಮ ರಾಜಕೀಯ ಹಿತಾಸಕ್ತಿಯೇ ಮುಖ್ಯ ಎನ್ನುವದನ್ನು ಸಾಬೀತುಪಡಿಸಿದಿರಿ! ನಿಮ್ಮ ಪಕ್ಷದ ಚಿಹ್ನೆಯನ್ನು ಹೊರೆಹೊತ್ತ ರೈತ ಮಹಿಳೆಯಿಂದ ಕಮಲ ಹೊತ್ತ ಅದಾನಿ ಮಾಡಿ! ರಾಜಕೀಯವಾಗಿ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಯಶವಂತ್ ಪಿ.ಎನ್‌ರವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...