Homeಕರ್ನಾಟಕಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ ಎ, (ಪಿಎಚ್‌ಡಿ) ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ

- Advertisement -
- Advertisement -

ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ಭರದಲ್ಲಿ ಸಾಗಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಗಳೂ ಸಹ ದೊಡ್ಡ-ದೊಡ್ಡ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಆದರೆ ಇವುಗಳಲ್ಲಿ ಕೆಲವು ಅಭ್ಯರ್ಥಿಗಳು ಗೆದ್ದರೆ ತಾವು ಮಾಡುವಂತಹ ಕೆಲಸಗಳನ್ನು ಅತ್ಯಂತ ಜಾಣ್ಮೆಯಿಂದ, ವೈಚಾರಿಕವಾಗಿ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತುಂಬಾ ವಿಶೇಷವಾದ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ.ಎ, (ಪಿಎಚ್‌ಡಿ), ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮ ಪಂಚಾಯಿತಿಯ ಬಸವನದುರ್ಗದ 5 ನೇ ವಾರ್ಡಿನಿಂದ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

“ಪ್ರಜಾಪ್ರಭುತ್ವದಲ್ಲಿ ಗೌರವದ ಬದುಕು ಪ್ರತಿಯೊಬ್ಬ ಮನುಷ್ಯನ ಹಕ್ಕು. ಹಾಗೆಯೇ ಬಸವನದುರ್ಗದ ಗ್ರಾಮದ ಜನತೆ ಶ್ರಮಿಕರು, ರೈತರು, ಮಹಿಳೆಯರು ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಆದ ಕಾರಣ ತಮ್ಮ ಈ ಕೆಲಸದಲ್ಲಿರುವ ವಿವಿಧ ಸಮಸ್ಯೆಗಳನ್ನು ಮತ್ತು ತಮ್ಮ ಅವಶ್ಯಕತೆಗಳನ್ನು ಅರಿತು ಗ್ರಾಮದ ಜನತೆಯ ಸೇವೆ ಸಲ್ಲಿಸಲು ಇಚ್ಛಿಸಿ 2020ರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಆಯ್ಕೆಯ ಗುರುತಾದ ಟ್ರ್ಯಾಕ್ಟರ್‌ ಚಿಹ್ನೆಗೆ ಮತ ನೀಡಿ, ಗ್ರಾಮದ ತಮ್ಮ ಕೆಲಸದ ಕ್ಷೇತ್ರದಲ್ಲಿ ಸಿಗಬಹುದಾದ ಅನೇಕ ಯೋಜನೆಗಳನ್ನು ತಮಗೆ ಮುಟ್ಟಿಸಲು ಮತ್ತು ಗೌರವಾನ್ವಿತ ಬದುಕಿಗಾಗಿ ತಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.

“ಗ್ರಾಮದ ಶಿಕ್ಷಣ, ಆರೋಗ್ಯ, ವಸತಿ, ರಸ್ತೆ, ಚರಂಡಿ, ವಿದ್ಯುತ್, ಉದ್ಯೋಗ ಸೇರಿದಂತೆ ಮೂಲಸೌಕರ್ಯಗಳು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು- ಸಮಪಾಲು ಎನ್ನುವಂತೆ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸರಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಮಾಡಿ ಸ್ವಚ್ಚ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಟ್ರ್ಯಾಕ್ಟರ್‌ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಸಮಾಜದ ಪ್ರತಿ ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ:

ಯುವ ಜನತೆಗೆ;

“ಯುವಕರು ಭವಿಷ್ಯದಲ್ಲಿ ಮಾತ್ರವಲ್ಲ ವರ್ತಮಾನದ ಶಕ್ತಿ ಕೂಡ. ಯುವಕರ ಪ್ರಜ್ವಲ ಜೀವನಕ್ಕೆ ಶಿಕ್ಷಣ, ಉದ್ಯೋಗ, ಆರೋಗ್ಯ ಇವು ಬಹುಮುಖ್ಯ ಆದ್ಯತೆ ಎಂದು ಮನಗಂಡು ರಾಜಕೀಯ ಧ್ವನಿಯಾಗಿ ಗ್ರಾಮದ ಯುವಕರ ಅಭಿವೃದ್ಧಿಪರ ನಿಲ್ಲುತ್ತೇನೆ ಎಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ. ಹಾಗಾಗಿ ಟ್ರಾಕ್ಟರ್ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಬಹುಮತದಿಂದ ಗೆಲ್ಲಿಸಿ”

  1. ಇಲಾಖೆಗಳ ಮೂಲಕ ಕಬಡ್ಡಿ, ಕ್ರಿಕೇಟ್, ಇತರೆ ಕ್ರೀಡೆಗಳ ಪ್ರೋತ್ಸಾಹ.
  2. ಜರ್ಸಿ, ಗ್ಲೌಸ್, ಕ್ರಿಕೆಟ್ ಬ್ಯಾಟ್, ಮುಂತಾದ ಕ್ರೀಡಾ ಸಾಮಗ್ರಿಗಳು ದೊರಕಿಸುವುದು.
  3. ಜಿಮ್ ಪರಿಕರಗಳ ವ್ಯವಸ್ಥೆಗೆ ಪ್ರಯತ್ನ.
  4. ಉದ್ಯೋಗ ಅವಕಾಶಕ್ಕಾಗಿ ಉದ್ಯೋಗ ಮೇಳ.
  5. ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಸಹಾಯಧನ ಶೀಘ್ರ ಬಿಡುಗಡೆ.
  6. ಉಚಿತ ಕಂಪ್ಯೂಟರ್ ತರಬೇತಿ.
  7. ಗ್ರಂಥಾಲಯಕ್ಕೆ ಪ್ರಯತ್ನಿಸುವುದು.

ಇದನ್ನೂ ಓದಿ: ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಮಹಿಳೆಯರಿಗೆ;

ಸಮಾಜದ ಪ್ರಗತಿಯನ್ನು ಮಹಿಳೆಯರನ್ನು ಹೊರತುಪಡಿಸಿ ನೋಡಲು ಸಾಧ್ಯವಿಲ್ಲ. ಅರ್ಧದಷ್ಟು ಜನಸಂಖ್ಯೆಯಲ್ಲಿರುವ ಮಹಿಳೆಯರು ಕೌಟುಂಬಿಕವಾಗಿ ಮಾತ್ರವಲ್ಲ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿಯೂ ಮಹಿಳೆಯರ ಕೊಡುಗೆ ಅಪಾರವಾದುದು. ಹಾಗಾಗಿ ಮಹಿಳೆಯ ಸ್ವಾವಲಂಬನೆ ಮತ್ತು ಆರೋಗ್ಯ ಬಹುಮುಖ್ಯವಾದದ್ದು ಎಂದು ನಂಬಿದ್ದೇನೆ. ಹಾಗೆಯೇ ಮಹಿಳೆಯರು ಅನೇಕ ಸಮಸ್ಯೆಗಳು, ತೊಳಲಾಟಗಳಲ್ಲಿ ಬದುಕುತ್ತಿರುವುದು ಅರ್ಥಮಾಡಿಕೊಳ್ಳದ ವಿಷಯವೇನಲ್ಲ. ಹಾಗಾಗಿ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಟ್ರಾಕ್ಟರ್ ಚಿಹ್ನೆಗೆ ತಮ್ಮ ಅಮೂಲ್ಯವಾದ ಮತ ನೀಡಿ ನನ್ನನು ಆಯ್ಕೆ ಮಾಡಿ, ನಿಮ್ಮ ಸಹೋದರನಾಗಿ, ಮಗನಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಮಾಡಿ ಕೊಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

  1. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
  2. ಸ್ವಯಂ ಉದ್ಯೋಗ ತರಬೇತಿ ಮತ್ತು ಮಾಹಿತಿ.
  3. ಮಹಿಳಾ ಮತ್ತು ಮಕ್ಕಳ ಆರೋಗ್ಯ ಕುರಿತು ಕಾಳಜಿ.

ರೈತರಿಗೆ;

  1. ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವುದು.
  2. ಉದ್ಯೋಗ ಖಾತರಿ ಯೋಜನೆ ಅಡಿ 200 ಮಾನವ ದಿನ ಸೃಷ್ಟಿಗೆ ಮನವಿ ಸಲ್ಲಿಸುವುದು.
  3. MGNREG ಯೋಜನೆ ಮೂಲಕ ಕಾಲುವೆಗಳ ಸ್ವಚ್ಛತೆ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸುವುದು.
  4. MGNREG ಮೂಲಕ ಕೃಷಿ ಮತ್ತು ಕೃಷಿಯೇತರ ಸ್ವಯಂ ಚಟುವಟಿಕೆಗೆ ಅನುಕೂಲ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಮ್ಮ ಖಾಸಗಿ ಆಸ್ತಿ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡುವುದು.

ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಒಟ್ಟು ಗ್ರಾಮಕ್ಕೆ;

  1. ವರ್ಷಕ್ಕೆ 2 ಸಾವಿರ ಗಿಡಗಳಂತೆ ಐದು ವರ್ಷಕ್ಕೆ 10 ಸಾವಿರ ಗಿಡ ನೆಡುವುದು (ಪಂಚಾಯತ್ ವ್ಯಾಪ್ತಿಯಲ್ಲಿ).
  2. ರಸ್ತೆ, ಚರಂಡಿ, ಕುಡಿಯುವ ನೀರು, ವಸತಿಗೆ ಆದ್ಯತೆ.
  3. ಹಕ್ಕು ಪತ್ರ ನೀಡಲು ಒತ್ತಾಯಿಸುವುದು.
  4. ಕಂದಾಯ ಅದಾಲತ್ ಪ್ರತಿ ಆರು ತಿಂಗಳಿಗೊಮ್ಮೆಳಿಗೊಮ್ಮೆ ಸಮಸ್ಯೆ ಬಗೆ ಹರಿಸುವುದು (ವಿಧವಾ, ವೃದ್ಧಾಪ್ಯ,ಅಂಗವಿಕಲ).
  5. ತಿಂಗಳಲ್ಲಿ ಒಂದು ದಿನ ಆಡಳಿತ ವ್ಯವಸ್ಥೆ ಗ್ರಾಮದಲ್ಲಿದ್ದು ಸಮಸ್ಯೆ ಬಗೆಹರಿಸುವುದು.
  6. ಗ್ರಾಮದಲ್ಲಿ ಆಡಳಿತ ಸಂಬಂಧಿ ದೂರುಗಳಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಅಲ್ಲಲ್ಲಿ ಬರೆಯುವುದು.
  7. ಸಮುದಾಯ ಭವನ ನಿರ್ಮಿಸುವುದು.
  8. ಆಧುನಿಕ ಬಸ್ ನಿಲ್ದಾಣ.
  9. ಗ್ರಾಮದಲ್ಲಿ ಎಟಿಎಂ/ಬ್ಯಾಂಕ್‌ಗಾಗಿ ಪ್ರಯತ್ನಿಸುವುದು.
  10. ನಿಗಮಗಳಲ್ಲಿನ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು.
  11. ನಿರ್ಗತಿಕರಿಗೆ ಅಂತ್ಯ ಸಂಸ್ಕಾರಕ್ಕೆ ಪಂಚಾಯಿತಿಯಿಂದ ಸಹಾಯ ಒದಗಿಸುವುದು.
  12. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಮೂಲಕ ಬಡತನ, ನಿರುದ್ಯೋಗ, ವಲಸೆಯನ್ನು ತಡೆಯುವುದು.
  13. ಗ್ರಾಮದ ಭೋವಿ ಸಮುದಾಯಕ್ಕೆ ಕಲ್ಲು ಕೆಲಸಕ್ಕೆ ಪ್ರತ್ಯೇಕ ಪರವಾನಗಿಗಾಗಿ ಒತ್ತಾಯಿಸುವುದು.
  14. ಗ್ರಾಮದ ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರದ ಇನ್ನೂರೆನ್ಸ್ ಬಗ್ಗೆ ಮಾಹಿತಿ ಒದಗಿಸುವುದು.
  15. ಜಾಗ ಇಲ್ಲದವರಿಗೆ ನಿವೇಶನ ಒದಗಿಸಲು ಪ್ರಯತ್ನಿಸುವುದು.

ಹೀಗೆ ಗ್ರಾಮದ ಪ್ರತಿ ವರ್ಗವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯಲು ತಮ್ಮ ಯೋಚನೆಗಳನ್ನು ಪ್ರಣಾಳಿಕೆಯ ಮೂಲಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...