Homeಕರ್ನಾಟಕಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ ಎ, (ಪಿಎಚ್‌ಡಿ) ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ

- Advertisement -
- Advertisement -

ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ಭರದಲ್ಲಿ ಸಾಗಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಗಳೂ ಸಹ ದೊಡ್ಡ-ದೊಡ್ಡ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಆದರೆ ಇವುಗಳಲ್ಲಿ ಕೆಲವು ಅಭ್ಯರ್ಥಿಗಳು ಗೆದ್ದರೆ ತಾವು ಮಾಡುವಂತಹ ಕೆಲಸಗಳನ್ನು ಅತ್ಯಂತ ಜಾಣ್ಮೆಯಿಂದ, ವೈಚಾರಿಕವಾಗಿ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತುಂಬಾ ವಿಶೇಷವಾದ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ.ಎ, (ಪಿಎಚ್‌ಡಿ), ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮ ಪಂಚಾಯಿತಿಯ ಬಸವನದುರ್ಗದ 5 ನೇ ವಾರ್ಡಿನಿಂದ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

“ಪ್ರಜಾಪ್ರಭುತ್ವದಲ್ಲಿ ಗೌರವದ ಬದುಕು ಪ್ರತಿಯೊಬ್ಬ ಮನುಷ್ಯನ ಹಕ್ಕು. ಹಾಗೆಯೇ ಬಸವನದುರ್ಗದ ಗ್ರಾಮದ ಜನತೆ ಶ್ರಮಿಕರು, ರೈತರು, ಮಹಿಳೆಯರು ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಆದ ಕಾರಣ ತಮ್ಮ ಈ ಕೆಲಸದಲ್ಲಿರುವ ವಿವಿಧ ಸಮಸ್ಯೆಗಳನ್ನು ಮತ್ತು ತಮ್ಮ ಅವಶ್ಯಕತೆಗಳನ್ನು ಅರಿತು ಗ್ರಾಮದ ಜನತೆಯ ಸೇವೆ ಸಲ್ಲಿಸಲು ಇಚ್ಛಿಸಿ 2020ರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಆಯ್ಕೆಯ ಗುರುತಾದ ಟ್ರ್ಯಾಕ್ಟರ್‌ ಚಿಹ್ನೆಗೆ ಮತ ನೀಡಿ, ಗ್ರಾಮದ ತಮ್ಮ ಕೆಲಸದ ಕ್ಷೇತ್ರದಲ್ಲಿ ಸಿಗಬಹುದಾದ ಅನೇಕ ಯೋಜನೆಗಳನ್ನು ತಮಗೆ ಮುಟ್ಟಿಸಲು ಮತ್ತು ಗೌರವಾನ್ವಿತ ಬದುಕಿಗಾಗಿ ತಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.

“ಗ್ರಾಮದ ಶಿಕ್ಷಣ, ಆರೋಗ್ಯ, ವಸತಿ, ರಸ್ತೆ, ಚರಂಡಿ, ವಿದ್ಯುತ್, ಉದ್ಯೋಗ ಸೇರಿದಂತೆ ಮೂಲಸೌಕರ್ಯಗಳು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು- ಸಮಪಾಲು ಎನ್ನುವಂತೆ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸರಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಮಾಡಿ ಸ್ವಚ್ಚ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಟ್ರ್ಯಾಕ್ಟರ್‌ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಸಮಾಜದ ಪ್ರತಿ ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ:

ಯುವ ಜನತೆಗೆ;

“ಯುವಕರು ಭವಿಷ್ಯದಲ್ಲಿ ಮಾತ್ರವಲ್ಲ ವರ್ತಮಾನದ ಶಕ್ತಿ ಕೂಡ. ಯುವಕರ ಪ್ರಜ್ವಲ ಜೀವನಕ್ಕೆ ಶಿಕ್ಷಣ, ಉದ್ಯೋಗ, ಆರೋಗ್ಯ ಇವು ಬಹುಮುಖ್ಯ ಆದ್ಯತೆ ಎಂದು ಮನಗಂಡು ರಾಜಕೀಯ ಧ್ವನಿಯಾಗಿ ಗ್ರಾಮದ ಯುವಕರ ಅಭಿವೃದ್ಧಿಪರ ನಿಲ್ಲುತ್ತೇನೆ ಎಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ. ಹಾಗಾಗಿ ಟ್ರಾಕ್ಟರ್ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಬಹುಮತದಿಂದ ಗೆಲ್ಲಿಸಿ”

  1. ಇಲಾಖೆಗಳ ಮೂಲಕ ಕಬಡ್ಡಿ, ಕ್ರಿಕೇಟ್, ಇತರೆ ಕ್ರೀಡೆಗಳ ಪ್ರೋತ್ಸಾಹ.
  2. ಜರ್ಸಿ, ಗ್ಲೌಸ್, ಕ್ರಿಕೆಟ್ ಬ್ಯಾಟ್, ಮುಂತಾದ ಕ್ರೀಡಾ ಸಾಮಗ್ರಿಗಳು ದೊರಕಿಸುವುದು.
  3. ಜಿಮ್ ಪರಿಕರಗಳ ವ್ಯವಸ್ಥೆಗೆ ಪ್ರಯತ್ನ.
  4. ಉದ್ಯೋಗ ಅವಕಾಶಕ್ಕಾಗಿ ಉದ್ಯೋಗ ಮೇಳ.
  5. ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಸಹಾಯಧನ ಶೀಘ್ರ ಬಿಡುಗಡೆ.
  6. ಉಚಿತ ಕಂಪ್ಯೂಟರ್ ತರಬೇತಿ.
  7. ಗ್ರಂಥಾಲಯಕ್ಕೆ ಪ್ರಯತ್ನಿಸುವುದು.

ಇದನ್ನೂ ಓದಿ: ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಮಹಿಳೆಯರಿಗೆ;

ಸಮಾಜದ ಪ್ರಗತಿಯನ್ನು ಮಹಿಳೆಯರನ್ನು ಹೊರತುಪಡಿಸಿ ನೋಡಲು ಸಾಧ್ಯವಿಲ್ಲ. ಅರ್ಧದಷ್ಟು ಜನಸಂಖ್ಯೆಯಲ್ಲಿರುವ ಮಹಿಳೆಯರು ಕೌಟುಂಬಿಕವಾಗಿ ಮಾತ್ರವಲ್ಲ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿಯೂ ಮಹಿಳೆಯರ ಕೊಡುಗೆ ಅಪಾರವಾದುದು. ಹಾಗಾಗಿ ಮಹಿಳೆಯ ಸ್ವಾವಲಂಬನೆ ಮತ್ತು ಆರೋಗ್ಯ ಬಹುಮುಖ್ಯವಾದದ್ದು ಎಂದು ನಂಬಿದ್ದೇನೆ. ಹಾಗೆಯೇ ಮಹಿಳೆಯರು ಅನೇಕ ಸಮಸ್ಯೆಗಳು, ತೊಳಲಾಟಗಳಲ್ಲಿ ಬದುಕುತ್ತಿರುವುದು ಅರ್ಥಮಾಡಿಕೊಳ್ಳದ ವಿಷಯವೇನಲ್ಲ. ಹಾಗಾಗಿ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಟ್ರಾಕ್ಟರ್ ಚಿಹ್ನೆಗೆ ತಮ್ಮ ಅಮೂಲ್ಯವಾದ ಮತ ನೀಡಿ ನನ್ನನು ಆಯ್ಕೆ ಮಾಡಿ, ನಿಮ್ಮ ಸಹೋದರನಾಗಿ, ಮಗನಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಮಾಡಿ ಕೊಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

  1. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
  2. ಸ್ವಯಂ ಉದ್ಯೋಗ ತರಬೇತಿ ಮತ್ತು ಮಾಹಿತಿ.
  3. ಮಹಿಳಾ ಮತ್ತು ಮಕ್ಕಳ ಆರೋಗ್ಯ ಕುರಿತು ಕಾಳಜಿ.

ರೈತರಿಗೆ;

  1. ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವುದು.
  2. ಉದ್ಯೋಗ ಖಾತರಿ ಯೋಜನೆ ಅಡಿ 200 ಮಾನವ ದಿನ ಸೃಷ್ಟಿಗೆ ಮನವಿ ಸಲ್ಲಿಸುವುದು.
  3. MGNREG ಯೋಜನೆ ಮೂಲಕ ಕಾಲುವೆಗಳ ಸ್ವಚ್ಛತೆ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸುವುದು.
  4. MGNREG ಮೂಲಕ ಕೃಷಿ ಮತ್ತು ಕೃಷಿಯೇತರ ಸ್ವಯಂ ಚಟುವಟಿಕೆಗೆ ಅನುಕೂಲ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಮ್ಮ ಖಾಸಗಿ ಆಸ್ತಿ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡುವುದು.

ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಒಟ್ಟು ಗ್ರಾಮಕ್ಕೆ;

  1. ವರ್ಷಕ್ಕೆ 2 ಸಾವಿರ ಗಿಡಗಳಂತೆ ಐದು ವರ್ಷಕ್ಕೆ 10 ಸಾವಿರ ಗಿಡ ನೆಡುವುದು (ಪಂಚಾಯತ್ ವ್ಯಾಪ್ತಿಯಲ್ಲಿ).
  2. ರಸ್ತೆ, ಚರಂಡಿ, ಕುಡಿಯುವ ನೀರು, ವಸತಿಗೆ ಆದ್ಯತೆ.
  3. ಹಕ್ಕು ಪತ್ರ ನೀಡಲು ಒತ್ತಾಯಿಸುವುದು.
  4. ಕಂದಾಯ ಅದಾಲತ್ ಪ್ರತಿ ಆರು ತಿಂಗಳಿಗೊಮ್ಮೆಳಿಗೊಮ್ಮೆ ಸಮಸ್ಯೆ ಬಗೆ ಹರಿಸುವುದು (ವಿಧವಾ, ವೃದ್ಧಾಪ್ಯ,ಅಂಗವಿಕಲ).
  5. ತಿಂಗಳಲ್ಲಿ ಒಂದು ದಿನ ಆಡಳಿತ ವ್ಯವಸ್ಥೆ ಗ್ರಾಮದಲ್ಲಿದ್ದು ಸಮಸ್ಯೆ ಬಗೆಹರಿಸುವುದು.
  6. ಗ್ರಾಮದಲ್ಲಿ ಆಡಳಿತ ಸಂಬಂಧಿ ದೂರುಗಳಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಅಲ್ಲಲ್ಲಿ ಬರೆಯುವುದು.
  7. ಸಮುದಾಯ ಭವನ ನಿರ್ಮಿಸುವುದು.
  8. ಆಧುನಿಕ ಬಸ್ ನಿಲ್ದಾಣ.
  9. ಗ್ರಾಮದಲ್ಲಿ ಎಟಿಎಂ/ಬ್ಯಾಂಕ್‌ಗಾಗಿ ಪ್ರಯತ್ನಿಸುವುದು.
  10. ನಿಗಮಗಳಲ್ಲಿನ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು.
  11. ನಿರ್ಗತಿಕರಿಗೆ ಅಂತ್ಯ ಸಂಸ್ಕಾರಕ್ಕೆ ಪಂಚಾಯಿತಿಯಿಂದ ಸಹಾಯ ಒದಗಿಸುವುದು.
  12. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಮೂಲಕ ಬಡತನ, ನಿರುದ್ಯೋಗ, ವಲಸೆಯನ್ನು ತಡೆಯುವುದು.
  13. ಗ್ರಾಮದ ಭೋವಿ ಸಮುದಾಯಕ್ಕೆ ಕಲ್ಲು ಕೆಲಸಕ್ಕೆ ಪ್ರತ್ಯೇಕ ಪರವಾನಗಿಗಾಗಿ ಒತ್ತಾಯಿಸುವುದು.
  14. ಗ್ರಾಮದ ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರದ ಇನ್ನೂರೆನ್ಸ್ ಬಗ್ಗೆ ಮಾಹಿತಿ ಒದಗಿಸುವುದು.
  15. ಜಾಗ ಇಲ್ಲದವರಿಗೆ ನಿವೇಶನ ಒದಗಿಸಲು ಪ್ರಯತ್ನಿಸುವುದು.

ಹೀಗೆ ಗ್ರಾಮದ ಪ್ರತಿ ವರ್ಗವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯಲು ತಮ್ಮ ಯೋಚನೆಗಳನ್ನು ಪ್ರಣಾಳಿಕೆಯ ಮೂಲಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...