Homeಕರ್ನಾಟಕರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

ರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

- Advertisement -
- Advertisement -

ರಾಯಚೂರು ಲೋಕಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಲಿದೆ. ಇಲ್ಲಿ ಒಂದು ವಾರದ ಹಿಂದೆಯೇ ಹಾಲಿ ಸಂಸದ ಬಿ.ವಿ ನಾಯಕ್‍ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ. ಬಿ.ವಿ ನಾಯಕ್ ಬಗ್ಗೆ ಕ್ಷೇತ್ರದಲ್ಲಿ ಈ ಹಿಂದೆ ಒಳ್ಳೆಯ ಹೆಸರು ಇರಲಿಲ್ಲ. ಆದರೆ ಈಗ ಟಿಕೆಟ್ ಪಡೆದಿರುವ ಪ್ರತಿಸ್ಪರ್ಧಿ ಬಿಜೆಪಿಯ ರಾಜಾ ಅಮರೇಶ್ವರ್ ನಾಯಕ್ ಪ್ರಬಲನಾಗಿ ಕಾಣುತ್ತಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಿಸಿ ಅಮರೇಶ್ ನಾಯಕ್‍ರನ್ನು ಸುಡುತ್ತಲೇ ಇದೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ದಂಡೇ ಇತ್ತು. ಮೊದಲನೆಯದಾಗಿ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್‍ಗಾಗಿ ಪ್ರಬಲ ಸ್ಪರ್ಧೆ ಒಡ್ಡಿದ್ದರು. ಇನ್ನು ಎರಡನೆಯ ಪೈಪೋಟಿ ನಡೆಸಿದ್ದು ಬಿಜೆಪಿಯ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ. ಈತ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ನಿಂತು ಸೋತಿದ್ದ. ಆಗಿನಿಂದ ಎಂಪಿ ಟಿಕೆಟ್ ಮೇಲೆ ಕಣ್ಣಿಟ್ಟು ಕೆಲಸ ಮಾಡಿದ್ದ. ಇದು ಈತನ ಗುರು ಹಾಲಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಕಿವಿಗೆ ಬಿದ್ದಿದೆ ತಡ ತನಗೂ ಟಿಕೆಟ್ ಬೇಕೆಂದು ಹಠ ಹಿಡಿದು ಕೂತಿದ್ದ. ಈತನಿಗೆ ತಾನು ಎಂಪಿ ಆಗುವುದಕ್ಕಿಂತ ತಾನು ಬೆಳೆಸಿದ, ತನ್ನ ಶಿಷ್ಯ ತಿಪ್ಪರಾಜು ಎಂಪಿ ಆಗದಂತೆ ತಡೆಯುವುದು ಮುಖ್ಯವಾಗಿತ್ತು. ಅದಕ್ಕಾಗಿ ತನಗೂ ಕೊಡಿ ಎಂಬ ದಾಳ ಉರುಳಿಸಿದ್ದ. ಕೊನೆಗೆ ಬಿಜೆಪಿ ಅಳೆದು ತೂಗಿ ರಾಜಾ ಅಮರೇಶ್ ನಾಯಕ್‍ಗೆ ಟಿಕೆಟ್ ನೀಡಿದೆ.

ಅಲ್ಲಿಗೆ ಶಿವನಗೌಡನಾಯಕ್ ತನ್ನ ಉದ್ದೇಶ ಫಲಿಸಿದ್ದಕ್ಕೆ ತಣ್ಣಗಾದರೆ, ಟಿಕೆಟ್ ತಪ್ಪಿದ್ದಕ್ಕೆ ತಿಪ್ಪರಾಜು ಕುದಿಯಲಾರಂಭಿಸಿದ್ದಾನೆ. ಟಿಕೆಟ್ ಗಾಗಿ ಯಡಿಯೂರಪ್ಪನಿಗೆ ದುಂಬಾಲು ಬಿದ್ದಿದ್ದ ಈತ, ಈಗ ಇದು ಯಡ್ಯೂರಪ್ಪನವರಿಗೆ ಮಾಡುತ್ತಿರುವ ಅವಮಾನ ಎಂದು ಬಹಿರಂಗವಾಗಿ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಈ ಬಂಡಾಯದ ಬಿಸಿ ಬಿಜೆಪಿಗೆ ದೊಡ್ಡ ತಲೆನೋವಾಗಿದೆ. ಆದರೆ ಅತ್ತ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಯಾವುದೇ ಬಂಡಾಯವಿಲ್ಲದೆ ಅನಾಯಾಸವಾಗಿ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್‍ನ ಭದ್ರ ಕೋಟೆಯಾಗಿರುವ ಇಲ್ಲಿ  ಜಾರಕಿಹೊಳಿ ಬ್ರದರ್ಸ್ ಪ್ರಭಾವ ದಡ್ಡವಾಗಿ ಹರಡಿದೆ. ಅವರ ಸಂಬಂಧಿಗಳು ರಾಜಕೀಯದ ಆಯಕಟ್ಟಿನ ಸ್ಥಾನದಲ್ಲಿ ಕೂತಿದ್ದಾರೆ. ಬಿ.ವಿ ನಾಯಕ್ ಕೂಡ ಜಾರಕಿಹೊಳಿ ಸಹೋದರರಿಗೆ ಸಂಬಂಧಿಯಾದ ಕಾರಣ ಎಲ್ಲರೂ ಅವರ ಪರ ಒಗ್ಗಟ್ಟಾಗಿ ನಿಂತಿದ್ದಾರೆ. ಇನ್ನು ಬಿಜೆಪಿ ಪಾಳಯದಲ್ಲಿ ಅಂತಹ ಒಗ್ಗಟ್ಟು ಕಂಡುಬರುತ್ತಿಲ್ಲ. ಬಂಡಾಯದ ಕಾರಣಕ್ಕಾಗಿ ಕೊನೆಗಳಿಗೆಯಲ್ಲಿ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಸಹ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದೇ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಈ ಬಾರಿಯ ಬಂಡಾಯದ ಬಿಸಿಯಿಂದ ತಪ್ಪಿಸಿಕೊಳ್ಳಲು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿ ಮೋದಿ ಮುಖ ಇಟ್ಟುಕೊಂಡು ವೋಟು ಕೇಳಿ ಎಂದು ಹಿರಿಯಲು ಸಲಹೆ ನೀಡುತ್ತಿದ್ದಾರೆ.

ಅಷ್ಟೆಲ್ಲಾ ಮೋದಿ ಅಲೆ ಇದ್ದ 2014ರಲ್ಲಿಯೇ ಗೆಲ್ಲಲಾಗದ ಬಿಜೆಪಿ ಈ ಬಾರಿ ಇಷ್ಟೆಲ್ಲಾ ಗೊಂದಲಗಳ ನಡುವೆ ಗೆಲ್ಲುವುದು ಕಷ್ಟ. ಇದೆಲ್ಲದರ ಅನುಕೂಲ, ಹೆಚ್ಚಿನ ಸಂಖ್ಯೆಯ ಶಾಸಕರು, ಜೆಡಿಎಸ್‍ನ ಬೆಂಬಲ, ಸಂಬಂಧಿಗಳ ನೆರವು ಎಲ್ಲವೂಗಳಿಂದ ಬಿ.ವಿ ನಾಯಕ್ ಮರು ಆಯ್ಕೆಯಾಗುವ ಸೂಚನೆಗಳಿವೆ. ತನ್ನ ಭದ್ರಕೋಟೆಯನ್ನು ಕಾಂಗ್ರೆಸ್ ಮತ್ತಷ್ಟು ಭದ್ರ ಮಾಡಿಕೊಳ್ಳಲು ಎಲ್ಲಾ ಅವಕಾಶಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...