Homeಕರ್ನಾಟಕರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

ರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

- Advertisement -
- Advertisement -

ರಾಯಚೂರು ಲೋಕಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಲಿದೆ. ಇಲ್ಲಿ ಒಂದು ವಾರದ ಹಿಂದೆಯೇ ಹಾಲಿ ಸಂಸದ ಬಿ.ವಿ ನಾಯಕ್‍ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ. ಬಿ.ವಿ ನಾಯಕ್ ಬಗ್ಗೆ ಕ್ಷೇತ್ರದಲ್ಲಿ ಈ ಹಿಂದೆ ಒಳ್ಳೆಯ ಹೆಸರು ಇರಲಿಲ್ಲ. ಆದರೆ ಈಗ ಟಿಕೆಟ್ ಪಡೆದಿರುವ ಪ್ರತಿಸ್ಪರ್ಧಿ ಬಿಜೆಪಿಯ ರಾಜಾ ಅಮರೇಶ್ವರ್ ನಾಯಕ್ ಪ್ರಬಲನಾಗಿ ಕಾಣುತ್ತಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಿಸಿ ಅಮರೇಶ್ ನಾಯಕ್‍ರನ್ನು ಸುಡುತ್ತಲೇ ಇದೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ದಂಡೇ ಇತ್ತು. ಮೊದಲನೆಯದಾಗಿ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್‍ಗಾಗಿ ಪ್ರಬಲ ಸ್ಪರ್ಧೆ ಒಡ್ಡಿದ್ದರು. ಇನ್ನು ಎರಡನೆಯ ಪೈಪೋಟಿ ನಡೆಸಿದ್ದು ಬಿಜೆಪಿಯ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ. ಈತ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ನಿಂತು ಸೋತಿದ್ದ. ಆಗಿನಿಂದ ಎಂಪಿ ಟಿಕೆಟ್ ಮೇಲೆ ಕಣ್ಣಿಟ್ಟು ಕೆಲಸ ಮಾಡಿದ್ದ. ಇದು ಈತನ ಗುರು ಹಾಲಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಕಿವಿಗೆ ಬಿದ್ದಿದೆ ತಡ ತನಗೂ ಟಿಕೆಟ್ ಬೇಕೆಂದು ಹಠ ಹಿಡಿದು ಕೂತಿದ್ದ. ಈತನಿಗೆ ತಾನು ಎಂಪಿ ಆಗುವುದಕ್ಕಿಂತ ತಾನು ಬೆಳೆಸಿದ, ತನ್ನ ಶಿಷ್ಯ ತಿಪ್ಪರಾಜು ಎಂಪಿ ಆಗದಂತೆ ತಡೆಯುವುದು ಮುಖ್ಯವಾಗಿತ್ತು. ಅದಕ್ಕಾಗಿ ತನಗೂ ಕೊಡಿ ಎಂಬ ದಾಳ ಉರುಳಿಸಿದ್ದ. ಕೊನೆಗೆ ಬಿಜೆಪಿ ಅಳೆದು ತೂಗಿ ರಾಜಾ ಅಮರೇಶ್ ನಾಯಕ್‍ಗೆ ಟಿಕೆಟ್ ನೀಡಿದೆ.

ಅಲ್ಲಿಗೆ ಶಿವನಗೌಡನಾಯಕ್ ತನ್ನ ಉದ್ದೇಶ ಫಲಿಸಿದ್ದಕ್ಕೆ ತಣ್ಣಗಾದರೆ, ಟಿಕೆಟ್ ತಪ್ಪಿದ್ದಕ್ಕೆ ತಿಪ್ಪರಾಜು ಕುದಿಯಲಾರಂಭಿಸಿದ್ದಾನೆ. ಟಿಕೆಟ್ ಗಾಗಿ ಯಡಿಯೂರಪ್ಪನಿಗೆ ದುಂಬಾಲು ಬಿದ್ದಿದ್ದ ಈತ, ಈಗ ಇದು ಯಡ್ಯೂರಪ್ಪನವರಿಗೆ ಮಾಡುತ್ತಿರುವ ಅವಮಾನ ಎಂದು ಬಹಿರಂಗವಾಗಿ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಈ ಬಂಡಾಯದ ಬಿಸಿ ಬಿಜೆಪಿಗೆ ದೊಡ್ಡ ತಲೆನೋವಾಗಿದೆ. ಆದರೆ ಅತ್ತ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಯಾವುದೇ ಬಂಡಾಯವಿಲ್ಲದೆ ಅನಾಯಾಸವಾಗಿ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್‍ನ ಭದ್ರ ಕೋಟೆಯಾಗಿರುವ ಇಲ್ಲಿ  ಜಾರಕಿಹೊಳಿ ಬ್ರದರ್ಸ್ ಪ್ರಭಾವ ದಡ್ಡವಾಗಿ ಹರಡಿದೆ. ಅವರ ಸಂಬಂಧಿಗಳು ರಾಜಕೀಯದ ಆಯಕಟ್ಟಿನ ಸ್ಥಾನದಲ್ಲಿ ಕೂತಿದ್ದಾರೆ. ಬಿ.ವಿ ನಾಯಕ್ ಕೂಡ ಜಾರಕಿಹೊಳಿ ಸಹೋದರರಿಗೆ ಸಂಬಂಧಿಯಾದ ಕಾರಣ ಎಲ್ಲರೂ ಅವರ ಪರ ಒಗ್ಗಟ್ಟಾಗಿ ನಿಂತಿದ್ದಾರೆ. ಇನ್ನು ಬಿಜೆಪಿ ಪಾಳಯದಲ್ಲಿ ಅಂತಹ ಒಗ್ಗಟ್ಟು ಕಂಡುಬರುತ್ತಿಲ್ಲ. ಬಂಡಾಯದ ಕಾರಣಕ್ಕಾಗಿ ಕೊನೆಗಳಿಗೆಯಲ್ಲಿ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಸಹ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದೇ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಈ ಬಾರಿಯ ಬಂಡಾಯದ ಬಿಸಿಯಿಂದ ತಪ್ಪಿಸಿಕೊಳ್ಳಲು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿ ಮೋದಿ ಮುಖ ಇಟ್ಟುಕೊಂಡು ವೋಟು ಕೇಳಿ ಎಂದು ಹಿರಿಯಲು ಸಲಹೆ ನೀಡುತ್ತಿದ್ದಾರೆ.

ಅಷ್ಟೆಲ್ಲಾ ಮೋದಿ ಅಲೆ ಇದ್ದ 2014ರಲ್ಲಿಯೇ ಗೆಲ್ಲಲಾಗದ ಬಿಜೆಪಿ ಈ ಬಾರಿ ಇಷ್ಟೆಲ್ಲಾ ಗೊಂದಲಗಳ ನಡುವೆ ಗೆಲ್ಲುವುದು ಕಷ್ಟ. ಇದೆಲ್ಲದರ ಅನುಕೂಲ, ಹೆಚ್ಚಿನ ಸಂಖ್ಯೆಯ ಶಾಸಕರು, ಜೆಡಿಎಸ್‍ನ ಬೆಂಬಲ, ಸಂಬಂಧಿಗಳ ನೆರವು ಎಲ್ಲವೂಗಳಿಂದ ಬಿ.ವಿ ನಾಯಕ್ ಮರು ಆಯ್ಕೆಯಾಗುವ ಸೂಚನೆಗಳಿವೆ. ತನ್ನ ಭದ್ರಕೋಟೆಯನ್ನು ಕಾಂಗ್ರೆಸ್ ಮತ್ತಷ್ಟು ಭದ್ರ ಮಾಡಿಕೊಳ್ಳಲು ಎಲ್ಲಾ ಅವಕಾಶಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...