Homeಕರ್ನಾಟಕರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

ರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

- Advertisement -
- Advertisement -

ರಾಯಚೂರು ಲೋಕಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಲಿದೆ. ಇಲ್ಲಿ ಒಂದು ವಾರದ ಹಿಂದೆಯೇ ಹಾಲಿ ಸಂಸದ ಬಿ.ವಿ ನಾಯಕ್‍ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ. ಬಿ.ವಿ ನಾಯಕ್ ಬಗ್ಗೆ ಕ್ಷೇತ್ರದಲ್ಲಿ ಈ ಹಿಂದೆ ಒಳ್ಳೆಯ ಹೆಸರು ಇರಲಿಲ್ಲ. ಆದರೆ ಈಗ ಟಿಕೆಟ್ ಪಡೆದಿರುವ ಪ್ರತಿಸ್ಪರ್ಧಿ ಬಿಜೆಪಿಯ ರಾಜಾ ಅಮರೇಶ್ವರ್ ನಾಯಕ್ ಪ್ರಬಲನಾಗಿ ಕಾಣುತ್ತಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಿಸಿ ಅಮರೇಶ್ ನಾಯಕ್‍ರನ್ನು ಸುಡುತ್ತಲೇ ಇದೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ದಂಡೇ ಇತ್ತು. ಮೊದಲನೆಯದಾಗಿ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್‍ಗಾಗಿ ಪ್ರಬಲ ಸ್ಪರ್ಧೆ ಒಡ್ಡಿದ್ದರು. ಇನ್ನು ಎರಡನೆಯ ಪೈಪೋಟಿ ನಡೆಸಿದ್ದು ಬಿಜೆಪಿಯ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ. ಈತ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ನಿಂತು ಸೋತಿದ್ದ. ಆಗಿನಿಂದ ಎಂಪಿ ಟಿಕೆಟ್ ಮೇಲೆ ಕಣ್ಣಿಟ್ಟು ಕೆಲಸ ಮಾಡಿದ್ದ. ಇದು ಈತನ ಗುರು ಹಾಲಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಕಿವಿಗೆ ಬಿದ್ದಿದೆ ತಡ ತನಗೂ ಟಿಕೆಟ್ ಬೇಕೆಂದು ಹಠ ಹಿಡಿದು ಕೂತಿದ್ದ. ಈತನಿಗೆ ತಾನು ಎಂಪಿ ಆಗುವುದಕ್ಕಿಂತ ತಾನು ಬೆಳೆಸಿದ, ತನ್ನ ಶಿಷ್ಯ ತಿಪ್ಪರಾಜು ಎಂಪಿ ಆಗದಂತೆ ತಡೆಯುವುದು ಮುಖ್ಯವಾಗಿತ್ತು. ಅದಕ್ಕಾಗಿ ತನಗೂ ಕೊಡಿ ಎಂಬ ದಾಳ ಉರುಳಿಸಿದ್ದ. ಕೊನೆಗೆ ಬಿಜೆಪಿ ಅಳೆದು ತೂಗಿ ರಾಜಾ ಅಮರೇಶ್ ನಾಯಕ್‍ಗೆ ಟಿಕೆಟ್ ನೀಡಿದೆ.

ಅಲ್ಲಿಗೆ ಶಿವನಗೌಡನಾಯಕ್ ತನ್ನ ಉದ್ದೇಶ ಫಲಿಸಿದ್ದಕ್ಕೆ ತಣ್ಣಗಾದರೆ, ಟಿಕೆಟ್ ತಪ್ಪಿದ್ದಕ್ಕೆ ತಿಪ್ಪರಾಜು ಕುದಿಯಲಾರಂಭಿಸಿದ್ದಾನೆ. ಟಿಕೆಟ್ ಗಾಗಿ ಯಡಿಯೂರಪ್ಪನಿಗೆ ದುಂಬಾಲು ಬಿದ್ದಿದ್ದ ಈತ, ಈಗ ಇದು ಯಡ್ಯೂರಪ್ಪನವರಿಗೆ ಮಾಡುತ್ತಿರುವ ಅವಮಾನ ಎಂದು ಬಹಿರಂಗವಾಗಿ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಈ ಬಂಡಾಯದ ಬಿಸಿ ಬಿಜೆಪಿಗೆ ದೊಡ್ಡ ತಲೆನೋವಾಗಿದೆ. ಆದರೆ ಅತ್ತ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಯಾವುದೇ ಬಂಡಾಯವಿಲ್ಲದೆ ಅನಾಯಾಸವಾಗಿ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್‍ನ ಭದ್ರ ಕೋಟೆಯಾಗಿರುವ ಇಲ್ಲಿ  ಜಾರಕಿಹೊಳಿ ಬ್ರದರ್ಸ್ ಪ್ರಭಾವ ದಡ್ಡವಾಗಿ ಹರಡಿದೆ. ಅವರ ಸಂಬಂಧಿಗಳು ರಾಜಕೀಯದ ಆಯಕಟ್ಟಿನ ಸ್ಥಾನದಲ್ಲಿ ಕೂತಿದ್ದಾರೆ. ಬಿ.ವಿ ನಾಯಕ್ ಕೂಡ ಜಾರಕಿಹೊಳಿ ಸಹೋದರರಿಗೆ ಸಂಬಂಧಿಯಾದ ಕಾರಣ ಎಲ್ಲರೂ ಅವರ ಪರ ಒಗ್ಗಟ್ಟಾಗಿ ನಿಂತಿದ್ದಾರೆ. ಇನ್ನು ಬಿಜೆಪಿ ಪಾಳಯದಲ್ಲಿ ಅಂತಹ ಒಗ್ಗಟ್ಟು ಕಂಡುಬರುತ್ತಿಲ್ಲ. ಬಂಡಾಯದ ಕಾರಣಕ್ಕಾಗಿ ಕೊನೆಗಳಿಗೆಯಲ್ಲಿ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಸಹ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದೇ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಈ ಬಾರಿಯ ಬಂಡಾಯದ ಬಿಸಿಯಿಂದ ತಪ್ಪಿಸಿಕೊಳ್ಳಲು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿ ಮೋದಿ ಮುಖ ಇಟ್ಟುಕೊಂಡು ವೋಟು ಕೇಳಿ ಎಂದು ಹಿರಿಯಲು ಸಲಹೆ ನೀಡುತ್ತಿದ್ದಾರೆ.

ಅಷ್ಟೆಲ್ಲಾ ಮೋದಿ ಅಲೆ ಇದ್ದ 2014ರಲ್ಲಿಯೇ ಗೆಲ್ಲಲಾಗದ ಬಿಜೆಪಿ ಈ ಬಾರಿ ಇಷ್ಟೆಲ್ಲಾ ಗೊಂದಲಗಳ ನಡುವೆ ಗೆಲ್ಲುವುದು ಕಷ್ಟ. ಇದೆಲ್ಲದರ ಅನುಕೂಲ, ಹೆಚ್ಚಿನ ಸಂಖ್ಯೆಯ ಶಾಸಕರು, ಜೆಡಿಎಸ್‍ನ ಬೆಂಬಲ, ಸಂಬಂಧಿಗಳ ನೆರವು ಎಲ್ಲವೂಗಳಿಂದ ಬಿ.ವಿ ನಾಯಕ್ ಮರು ಆಯ್ಕೆಯಾಗುವ ಸೂಚನೆಗಳಿವೆ. ತನ್ನ ಭದ್ರಕೋಟೆಯನ್ನು ಕಾಂಗ್ರೆಸ್ ಮತ್ತಷ್ಟು ಭದ್ರ ಮಾಡಿಕೊಳ್ಳಲು ಎಲ್ಲಾ ಅವಕಾಶಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...