Homeಚಳವಳಿಮುಂದುವರೆದ ರೈತ ಹೋರಾಟ - ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

"ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ"

- Advertisement -
- Advertisement -

ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ. ಲಕ್ಷಾಂತರ ಜನರು, ಸಾವಿರಾರು ವಾಹನಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.

ರೈತ ಹೋರಾಟವನ್ನು ಬೆಂಬಲಿಸಲು ಕರ್ನಾಟಕದಿಂದ ಆಗಮಿಸಿದ್ದ ನಿಯೋಗವು ಇಂದು ದಿಲ್ಲಿಯ ಪಂಜಾಬ್ ಹರಿಯಾಣ ಗಡಿ ಭಾಗವಾದ ಟಿಕ್ರಿಗೆ ಭೇಟಿ ನೀಡಿತು. ಕರ್ನಾಟಕದ ನಿಯೋಗವನ್ನು ಟಿಕ್ರಿ ಗಡಿಯಲ್ಲಿ ಬಿಕೆಯು ಸಂಘಟನೆಯ ಗೆಳೆಯರು ನೂರಾರು ಕಾರ್ಯಕರ್ತರೊಂದಿಗೆ ಬಹದ್ದೂರ್‌ ಘಡ್ ವೃತ್ತದಲ್ಲಿ ಸ್ವಾಗತ ಮಾಡಿದರು. ಬಹದ್ದೂರ್ ಘಡ್ ವೃತ್ತದಿಂದ ಕರ್ನಾಟಕದ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಪ್ರಮುಖರೊಂದಿಗೆ, ಈ ಸಂಘಟನೆಯ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಹಾಕುತ್ತಾ ಕಿ.ಮೀ.ಗಟ್ಟಲೆ ಮೆರವಣಿಗೆ ಹೊರಟು ಪ್ರತಿಭಟನೆಯ ಪ್ರಮುಖ ವೇದಿಕೆಗೆ ತಲುಪಿದೆವು.

ಇಂದು ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚಿನ ಸಂಘಟನೆಯ ಪ್ರಮುಖರು ಮಾತನಾಡಿದರು. ಮಾತನಾಡಿದ ಎಲ್ಲ ಸಂಘಟನೆಗಳ ಪ್ರಮುಖರು ಮೋದಿ ಸರ್ಕಾರದ ರೈತ-ಕಾರ್ಮಿಕ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿದರು.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಜಾರಿಗೆ ತಂದಿರುವ ಕರಾಳ ಕಾನೂನು ರದ್ದು ಮಾಡುವವರೆಗೂ ಹೋರಾಟ ನಿಲ್ಲದು. ಬದಲಿಗೆ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಸಂಘಟನೆಯ ಪ್ರಮುಖರು ರೈತರ ಸಮಸ್ಯೆಯ ಜೊತೆಗೆ ದಲಿತ ಕಾರ್ಮಿಕ ಸಮಸ್ಯೆಗಳ ಪರಿಹಾರಕ್ಕೂ ಗಂಭೀರ ಹೋರಾಟ ರೂಪಿಸಲಾಗುವುದು ಎಂದರು.

ವೇದಿಕೆಯಲ್ಲಿ ಕರ್ನಾಟಕ ನಿಯೋಗದ ಪ್ರಮುಖರಲ್ಲಿ ಒಬ್ಬರಾದ ದಲಿತ ಸಂಘಟನೆಯ ಪ್ರಮುಖರಾದ ಗುರುಪ್ರಸಾದ್ ಕೆರೆಗೋಡು ಮಾತನಾಡಿ, “ಉತ್ತರ ಭಾರತದಲ್ಲಿ ರೈತರ ಬೆಳೆ ಮತ್ತು ಬೆಲೆಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಳೆ ಬೆಲೆಯ ಜೊತೆಗೆ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ದೇಶಕ್ಕೆ ಮಾದರಿಯಾದ ದೇವರಾಜು ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾನೂನು ದೇಶಕ್ಕೆ ಮಾದರಿಯಾಗಿತ್ತು. ಹಾಲಿ ಈ ಕಾನೂನಿಗೆ ತಿದ್ದುಪಡಿತಂದು, ರೈತರಿಂದ ಕಿತ್ತು ಕಾರ್ಪೊರೇಟ್ ಕುಳಗಳಿಗೆ ಹಂಚುತ್ತಿದ್ದಾರೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮುಖ್ಯಮಂತ್ರಿ ರೈತ ದ್ರೋಹಿಯಾಗಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಐಕ್ಯ ಹೋರಾಟದ ಅಡಿಯಲ್ಲಿ ರೈತ ದಲಿತ ಕಾರ್ಮಿಕರಿಗೆ ಸರ್ಕಾರ ಮಾಡುತ್ತಿರುವ ದ್ರೋಹದ ವಿರುದ್ದ ಹೋರಾಟ ರೂಪಿಸಿ ನಿರಂತರವಾಗಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟವು ನಿಮ್ಮೊಂದಿಗೆ ಇನ್ನಷ್ಟು ಸಂಘಟನಾತ್ಮವಾಗಿ ಸಾಥ್ ನೀಡಲಿದೆ” ಎಂದರು.

ಇವರ ಕನ್ನಡ ಭಾಷಣವನ್ನು ರೈತಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಕನ್ನಡದಿಂದ ಹಿಂದಿಗೆ ಭಾಷಾಂತರ ಮಾಡಿದರು.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...