Homeಚಳವಳಿಮುಂದುವರೆದ ರೈತ ಹೋರಾಟ - ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

"ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ"

- Advertisement -
- Advertisement -

ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ. ಲಕ್ಷಾಂತರ ಜನರು, ಸಾವಿರಾರು ವಾಹನಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.

ರೈತ ಹೋರಾಟವನ್ನು ಬೆಂಬಲಿಸಲು ಕರ್ನಾಟಕದಿಂದ ಆಗಮಿಸಿದ್ದ ನಿಯೋಗವು ಇಂದು ದಿಲ್ಲಿಯ ಪಂಜಾಬ್ ಹರಿಯಾಣ ಗಡಿ ಭಾಗವಾದ ಟಿಕ್ರಿಗೆ ಭೇಟಿ ನೀಡಿತು. ಕರ್ನಾಟಕದ ನಿಯೋಗವನ್ನು ಟಿಕ್ರಿ ಗಡಿಯಲ್ಲಿ ಬಿಕೆಯು ಸಂಘಟನೆಯ ಗೆಳೆಯರು ನೂರಾರು ಕಾರ್ಯಕರ್ತರೊಂದಿಗೆ ಬಹದ್ದೂರ್‌ ಘಡ್ ವೃತ್ತದಲ್ಲಿ ಸ್ವಾಗತ ಮಾಡಿದರು. ಬಹದ್ದೂರ್ ಘಡ್ ವೃತ್ತದಿಂದ ಕರ್ನಾಟಕದ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಪ್ರಮುಖರೊಂದಿಗೆ, ಈ ಸಂಘಟನೆಯ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಹಾಕುತ್ತಾ ಕಿ.ಮೀ.ಗಟ್ಟಲೆ ಮೆರವಣಿಗೆ ಹೊರಟು ಪ್ರತಿಭಟನೆಯ ಪ್ರಮುಖ ವೇದಿಕೆಗೆ ತಲುಪಿದೆವು.

ಇಂದು ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚಿನ ಸಂಘಟನೆಯ ಪ್ರಮುಖರು ಮಾತನಾಡಿದರು. ಮಾತನಾಡಿದ ಎಲ್ಲ ಸಂಘಟನೆಗಳ ಪ್ರಮುಖರು ಮೋದಿ ಸರ್ಕಾರದ ರೈತ-ಕಾರ್ಮಿಕ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿದರು.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಜಾರಿಗೆ ತಂದಿರುವ ಕರಾಳ ಕಾನೂನು ರದ್ದು ಮಾಡುವವರೆಗೂ ಹೋರಾಟ ನಿಲ್ಲದು. ಬದಲಿಗೆ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಸಂಘಟನೆಯ ಪ್ರಮುಖರು ರೈತರ ಸಮಸ್ಯೆಯ ಜೊತೆಗೆ ದಲಿತ ಕಾರ್ಮಿಕ ಸಮಸ್ಯೆಗಳ ಪರಿಹಾರಕ್ಕೂ ಗಂಭೀರ ಹೋರಾಟ ರೂಪಿಸಲಾಗುವುದು ಎಂದರು.

ವೇದಿಕೆಯಲ್ಲಿ ಕರ್ನಾಟಕ ನಿಯೋಗದ ಪ್ರಮುಖರಲ್ಲಿ ಒಬ್ಬರಾದ ದಲಿತ ಸಂಘಟನೆಯ ಪ್ರಮುಖರಾದ ಗುರುಪ್ರಸಾದ್ ಕೆರೆಗೋಡು ಮಾತನಾಡಿ, “ಉತ್ತರ ಭಾರತದಲ್ಲಿ ರೈತರ ಬೆಳೆ ಮತ್ತು ಬೆಲೆಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಳೆ ಬೆಲೆಯ ಜೊತೆಗೆ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ದೇಶಕ್ಕೆ ಮಾದರಿಯಾದ ದೇವರಾಜು ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾನೂನು ದೇಶಕ್ಕೆ ಮಾದರಿಯಾಗಿತ್ತು. ಹಾಲಿ ಈ ಕಾನೂನಿಗೆ ತಿದ್ದುಪಡಿತಂದು, ರೈತರಿಂದ ಕಿತ್ತು ಕಾರ್ಪೊರೇಟ್ ಕುಳಗಳಿಗೆ ಹಂಚುತ್ತಿದ್ದಾರೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮುಖ್ಯಮಂತ್ರಿ ರೈತ ದ್ರೋಹಿಯಾಗಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಐಕ್ಯ ಹೋರಾಟದ ಅಡಿಯಲ್ಲಿ ರೈತ ದಲಿತ ಕಾರ್ಮಿಕರಿಗೆ ಸರ್ಕಾರ ಮಾಡುತ್ತಿರುವ ದ್ರೋಹದ ವಿರುದ್ದ ಹೋರಾಟ ರೂಪಿಸಿ ನಿರಂತರವಾಗಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟವು ನಿಮ್ಮೊಂದಿಗೆ ಇನ್ನಷ್ಟು ಸಂಘಟನಾತ್ಮವಾಗಿ ಸಾಥ್ ನೀಡಲಿದೆ” ಎಂದರು.

ಇವರ ಕನ್ನಡ ಭಾಷಣವನ್ನು ರೈತಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಕನ್ನಡದಿಂದ ಹಿಂದಿಗೆ ಭಾಷಾಂತರ ಮಾಡಿದರು.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...