Homeಮುಖಪುಟವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಕೊಡಬೇಕು ಎಂದು ಬಯಸಿದ್ದೆ- ಧರ್ಮೇಂದ್ರ ಅನಿಜಾ

- Advertisement -
- Advertisement -

ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ತನ್ನ ಪತ್ನಿಗೆ ಉಡುಗೊರೆ ನೀಡಲು ಚಂದ್ರನ ಮೇಲೆ ಮೂರು ಎಕರೆ ಭೂಮಿಯನ್ನು ಖರೀದಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಧರ್ಮೇಂದ್ರ ಅನಿಜಾ ಎಂಬುವವರು ತಮ್ಮ ಪತ್ನಿ ಸಪ್ನ ಅನಿಜಾ ಅವರಿಗೆ ಉಡುಗೊರೆ ನೀಡಲು ಲೂನಾ ಸೊಸೈಟಿ ಇಂಟರ್ನ್ಯಾಷನಲ್ ಮೂಲಕ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ್ದಾರೆ.

“ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ನಾನು ಅವಳಿಗೆ ವಿಶೇಷವಾಗಿ ಏನಾದರೂ ಕೊಡಬೇಕು ಎಂದು ಬಯಸಿದ್ದೆ. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಮಾಡಬೇಕು ಎಂದು ಬಯಸಿದ್ದೆ. ಆದ್ದರಿಂದ, ನಾನು ಅವಳಿಗೆ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

“ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ಬೇಕಾಯಿತು. ನಾನು ಸಂತೋಷವಾಗಿದ್ದೇನೆ. ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ ರಾಜಸ್ಥಾನದ ಮೊದಲ ವ್ಯಕ್ತಿ ನಾನೇ ಎಂದು ಭಾವಿಸುತ್ತೇನೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ.

ಈ ವಿಶೇಷವಾದ ಉಡುಗೊರೆಯನ್ನು ಸ್ವೀಕರಿಸಿದ ಸಪ್ನಾ ಅನಿಜಾ, “ಪ್ರಪಂಚದ ಹೊರಗಿನ ಉಡುಗೊರೆಯನ್ನು ಸ್ವೀಕರಿಸುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

“ಈವೆಂಟ್ ಮ್ಯಾನೇಜ್‌ಮೆಂಟ್‌ನವರು ಚಂದ್ರನ ಮೇಲ್ಮೈನಂತೆಯೇ ಸೆಟ್ ಹಾಕಿದ್ದರು. ನಿಜಕ್ಕೂ ನಾನು ಚಂದ್ರ ಗ್ರಹದ ಮೇಲೆಯೇ ಇದ್ದೇನೆ ಎಂದು ಭಾಸವಾಗುತ್ತಿತ್ತು. ಈ ಪಾರ್ಟಿಯಲ್ಲಿ ಆಸ್ತಿ ದಾಖಲೆಯ ಪ್ರಮಾಣಪತ್ರವನ್ನು ನನಗೆ ಉಡುಗೊರೆಯಾಗಿ ನೀಡಿದರು” ಎಂದು ಹೇಳಿದರು.

ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಸ್ಫೂರ್ತಿ ಪಡೆದ ಕೆಲವು ತಿಂಗಳ ನಂತರ, ಬೋಧ್ ಗಯಾ ನಿವಾಸಿ ನೀರಜ್ ಕುಮಾರ್, ತಮ್ಮ ಜನ್ಮದಿನದಂದು ಚಂದ್ರ ಗ್ರಹದಲ್ಲಿ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದರು.


ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...