Homeಮುಖಪುಟರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಬಳಕೆದಾರರಿದ್ದರೆ ಜಿಯೋಗೆ 33.2% ಬಳಕೆದಾರರಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಡಿಸೆಂಬರ್ 28 ರಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಜಮಾವಣೆಗೊಳ್ಳಲಿರುವ ನೂರಾರು ಕಾರ್ಯಕರ್ತರು ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಲು ಯೋಜಿಸಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ಸಜ್ಜಾಗಿದ್ದಾರೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಬಸರಾಜಪ್ಪನವರು “ಇವತ್ತು ಜಿಯೋ ಕಂಪನಿಯನ್ನು ಅಂಬಾನಿ ಕಂಪನಿಯೆಂದು ಹೇಳುವ ಬದಲು ಮೋದಿ ಕಂಪನಿಯೆಂದು ಹೇಳಬಹುದು. ಈ ಮೋದಿ ಇಂದು ಹೋರಾಟ ನಿರತ ರೈತರ ಹಕ್ಕೊತ್ತಾಯಗಳನ್ನು ಉದಾಸೀನ ಮಾಡುತ್ತಿದ್ದಾರೆ. ಅಲ್ಲದೇ ರೈತರನ್ನು ದೇಶದ್ರೋಹಿಗಳೆಂದು ಹಣೆಪಟ್ಟೆ ಕಟ್ಟಲಾಗುತ್ತಿದೆ. ಆದರೆ ದೇಶಕ್ಕೆ ಅನ್ನ ಕೊಡುವ ರೈತರು ದೇಶದ್ರೋಹಿಗಳಲ್ಲ. ರೈತರನ್ನು ಲೂಟಿ ಹೊಡೆಯುತ್ತಿರುವ ಅಂಬಾನಿ-ಅದಾನಿಗಳೇ ನಿಜವಾದ ದೇಶದ್ರೋಹಿಗಳು. ಹಾಗಾಗಿ ನಾವೆಲ್ಲರೂ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಆಗುತ್ತಿದ್ದೇವೆ. ಇನ್ನು ಏರ್‌ಟೆಲ್‌ನವರೇನು ನಮ್ಮನ್ನು ಕರೆದಿಲ್ಲ. ನಾವೇ ರೈತರ ಶಕ್ತಿ ತೋರಿಸಲು ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗಾಗಿ ನಾಡಿನ ರೈತರು ಮತ್ತು ಯುವಜನರು ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಎಚ್.ಆರ್ ಬಸವರಾಜಪ್ಪ

ಈಗಾಗಲೇ ಕಳೆದೊಂದು ತಿಂಗಳಿನಿಂದ ಬಾಯ್ಕಾಟ್ ಜಿಯೋ ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...