Homeಮುಖಪುಟರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಬಳಕೆದಾರರಿದ್ದರೆ ಜಿಯೋಗೆ 33.2% ಬಳಕೆದಾರರಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಡಿಸೆಂಬರ್ 28 ರಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಜಮಾವಣೆಗೊಳ್ಳಲಿರುವ ನೂರಾರು ಕಾರ್ಯಕರ್ತರು ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಲು ಯೋಜಿಸಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ಸಜ್ಜಾಗಿದ್ದಾರೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಬಸರಾಜಪ್ಪನವರು “ಇವತ್ತು ಜಿಯೋ ಕಂಪನಿಯನ್ನು ಅಂಬಾನಿ ಕಂಪನಿಯೆಂದು ಹೇಳುವ ಬದಲು ಮೋದಿ ಕಂಪನಿಯೆಂದು ಹೇಳಬಹುದು. ಈ ಮೋದಿ ಇಂದು ಹೋರಾಟ ನಿರತ ರೈತರ ಹಕ್ಕೊತ್ತಾಯಗಳನ್ನು ಉದಾಸೀನ ಮಾಡುತ್ತಿದ್ದಾರೆ. ಅಲ್ಲದೇ ರೈತರನ್ನು ದೇಶದ್ರೋಹಿಗಳೆಂದು ಹಣೆಪಟ್ಟೆ ಕಟ್ಟಲಾಗುತ್ತಿದೆ. ಆದರೆ ದೇಶಕ್ಕೆ ಅನ್ನ ಕೊಡುವ ರೈತರು ದೇಶದ್ರೋಹಿಗಳಲ್ಲ. ರೈತರನ್ನು ಲೂಟಿ ಹೊಡೆಯುತ್ತಿರುವ ಅಂಬಾನಿ-ಅದಾನಿಗಳೇ ನಿಜವಾದ ದೇಶದ್ರೋಹಿಗಳು. ಹಾಗಾಗಿ ನಾವೆಲ್ಲರೂ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಆಗುತ್ತಿದ್ದೇವೆ. ಇನ್ನು ಏರ್‌ಟೆಲ್‌ನವರೇನು ನಮ್ಮನ್ನು ಕರೆದಿಲ್ಲ. ನಾವೇ ರೈತರ ಶಕ್ತಿ ತೋರಿಸಲು ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗಾಗಿ ನಾಡಿನ ರೈತರು ಮತ್ತು ಯುವಜನರು ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಎಚ್.ಆರ್ ಬಸವರಾಜಪ್ಪ

ಈಗಾಗಲೇ ಕಳೆದೊಂದು ತಿಂಗಳಿನಿಂದ ಬಾಯ್ಕಾಟ್ ಜಿಯೋ ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...