Homeಮುಖಪುಟರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಬಳಕೆದಾರರಿದ್ದರೆ ಜಿಯೋಗೆ 33.2% ಬಳಕೆದಾರರಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಡಿಸೆಂಬರ್ 28 ರಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಜಮಾವಣೆಗೊಳ್ಳಲಿರುವ ನೂರಾರು ಕಾರ್ಯಕರ್ತರು ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಲು ಯೋಜಿಸಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ಸಜ್ಜಾಗಿದ್ದಾರೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಬಸರಾಜಪ್ಪನವರು “ಇವತ್ತು ಜಿಯೋ ಕಂಪನಿಯನ್ನು ಅಂಬಾನಿ ಕಂಪನಿಯೆಂದು ಹೇಳುವ ಬದಲು ಮೋದಿ ಕಂಪನಿಯೆಂದು ಹೇಳಬಹುದು. ಈ ಮೋದಿ ಇಂದು ಹೋರಾಟ ನಿರತ ರೈತರ ಹಕ್ಕೊತ್ತಾಯಗಳನ್ನು ಉದಾಸೀನ ಮಾಡುತ್ತಿದ್ದಾರೆ. ಅಲ್ಲದೇ ರೈತರನ್ನು ದೇಶದ್ರೋಹಿಗಳೆಂದು ಹಣೆಪಟ್ಟೆ ಕಟ್ಟಲಾಗುತ್ತಿದೆ. ಆದರೆ ದೇಶಕ್ಕೆ ಅನ್ನ ಕೊಡುವ ರೈತರು ದೇಶದ್ರೋಹಿಗಳಲ್ಲ. ರೈತರನ್ನು ಲೂಟಿ ಹೊಡೆಯುತ್ತಿರುವ ಅಂಬಾನಿ-ಅದಾನಿಗಳೇ ನಿಜವಾದ ದೇಶದ್ರೋಹಿಗಳು. ಹಾಗಾಗಿ ನಾವೆಲ್ಲರೂ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಆಗುತ್ತಿದ್ದೇವೆ. ಇನ್ನು ಏರ್‌ಟೆಲ್‌ನವರೇನು ನಮ್ಮನ್ನು ಕರೆದಿಲ್ಲ. ನಾವೇ ರೈತರ ಶಕ್ತಿ ತೋರಿಸಲು ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗಾಗಿ ನಾಡಿನ ರೈತರು ಮತ್ತು ಯುವಜನರು ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಎಚ್.ಆರ್ ಬಸವರಾಜಪ್ಪ

ಈಗಾಗಲೇ ಕಳೆದೊಂದು ತಿಂಗಳಿನಿಂದ ಬಾಯ್ಕಾಟ್ ಜಿಯೋ ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...