Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...