Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...