Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...