Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...