Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...