Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...