Homeಮುಖಪುಟಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಖಬರ್ ಲಹರಿಯಾ: ದಲಿತ ಹೆಣ್ಣು ಮಕ್ಕಳ ಯಶಸ್ವಿ ಪತ್ರಿಕೋದ್ಯಮ

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು.

- Advertisement -
- Advertisement -

ಡಾ. ಸ್ವಾತಿ ಶುಕ್ಲ

ಕನ್ನಡಕ್ಕೆ : ಮಲ್ಲನಗೌಡರ್ ಪಿ.ಕೆ

ನಟರಂತೆ ಹಾವಭಾವ ಪ್ರದರ್ಶಿಸುತ್ತ ದಿನವೀಡೀ ಅರಚಾಡುವ ಟಿವಿ ನಿರೂಪಕರಿಂದ ತಲೆ ಚಿಟ್ಟು ಹಿಡಿದಿದೆಯಾ? ಮತ್ತದೇ ಮೋದಿ ವರ್ಸಸ್ ರಾಹುಲ್ ಎಂಬ ಎರಡೇ ಆಯ್ಕೆಗಳ ಮೂರ್ಖತನವೂ ನಿಮಗೆ ಬೋರ್ ಹೊಡೆಸಿದೆಯಾ? ಹಾಗಾದರೆ ನೀವು ಪರ್ಯಾಯ ಮಾಧ್ಯಮದತ್ತ ಮುಖ ಮಾಡಲೇಬೇಕಾದ ಸಮಯವಿದು.

ಯಾವ ಬಂಡವಾಳಶಾಹಿಯ ಹಂಗಿಲ್ಲದೇ ಜನರೇ ಹಲವು ಪತ್ರಿಕೆಗಳನ್ನು ತರುವ ಮೂಲಕ ತಳ ಸಮುದಾಯಗಳಲ್ಲಿ ಎಚ್ಚರ ಮೂಡಿಸುವ ಯತ್ನಗಳು ದೇಶದ ಅಲ್ಲಲ್ಲಿ ನಡೆದಿವೆ. ಅಂತಹ ಒಂದು ಅಮೋಘ ಸಾಹಸವೇ ‘ಖಬರ್ ಲಹರಿಯಾ’… ಅಂದರೆ ಸುದ್ದಿಯ ಅಲೆಗಳು.. ‘ಖಬರ್ ಲಹರಿಯಾ’ ಎಂಬ ಈ ವಾರಪತ್ರಿಕೆಗೆ ಹಲವು ವೈಶಿಷ್ಟ್ಯಗಳು ಮತ್ತು ತನ್ನದೇ ಆದ ಅನನ್ಯತೆಯಿದೆ. ಮಹಿಳೆಯರಿಂದ ನಡೆಸಲ್ಪಡುವ ಸ್ವತಂತ್ರ, ಗ್ರಾಮೀಣ ವಿಷಯಾಧಾರಿತ ಮೊದಲ ಭಾರತೀಯ ವಾರಪತ್ರಿಕೆ ಎಂಬ ಹೆಗ್ಗಳಿಕೆ ಈ ಪತ್ರಿಕೆಯದ್ದು.

ಗ್ರಾಮೀಣ ಮಹಿಳೆಯರೇ ಸೇರಿಕೊಂಡು ಇಂತಹ ಪ್ರಯೋಗ ಮಾಡಿ ಉತ್ತರ ಭಾರತದ ಗ್ರಾಮಗಳಲ್ಲಿ ಯಶಸ್ವಿಯಾಗಿದ್ದು ಇದೇ ಮೊದಲು. ಮಹಿಳೆಯರೇ ಬರೆಯುತ್ತಾರೆ, ಎಡಿಟ್ ಮಾಡುತ್ತಾರೆ, ಫೋಟೊಗ್ರಫಿ ಕೂಡ ಅವರದೇ. ವಿಷಯ ಆಯ್ಕೆಯನ್ನು ಅವರೇ ಮಾಡುತ್ತಾರೆ ಮಾತ್ರವಲ್ಲ ಮಾರ್ಕೆಟಿಂಗ್ ಕೂಡ ಮಹಿಳೆಯರೆ ನಿಭಾಯಿಸುತ್ತಾರೆ. ಅಂದಂತೆ, ಈ ಮಹಿಳೆಯರ ಪೈಕಿ ಬಹುಪಾಲು ಜನ ದಲಿತ, ಆದಿವಾಸಿ ಮತ್ತು ಮುಸ್ಲಿಮ ಸಮುದಾಯಗಳಿಗೆ ಸೇರಿದವರು. ಈ ಸಮುದಾಯಗಳಿಂದಲೇ ಮಹಿಳೆಯರನ್ನು ಆಯ್ಕೆ ಮಾಡಿ, ಅವರಿಗೆ ವರದಿಗಾರಿಕೆ, ಫೋಟೊಗ್ರಫಿ, ವಿಡಿಯೋ ಮಾಡುವುದರ ಕುರಿತು ತರಬೇತಿ ನೀಡಿ ಸಜ್ಜುಗೊಳಿಸಲಾಗುತ್ತದೆ.

ಪತ್ರಿಕೆಗಳೇ ಇಲ್ಲದ ಗ್ರಾಮಗಳಿಗೆ ‘ಖಬರ್ ಲಹರಿಯಾ’ ಸುದ್ದಿಯ ಅಲೆಗಳನ್ನು, ಅದೂ ಬದುಕಿನ ಕುರಿತಾದ, ಮಹಿಳೆಯ ಬದುಕಿನ ಕುರಿತಾದ ವಿಷಯಗಳನ್ನು ತರುತ್ತಿದೆ. ಮೊದಲು ಇದು ಉತ್ತರಪ್ರದೇಶದ ಬುಂದೇಲ್‍ಖಂಡದಲ್ಲಿ ಶುರುವಾಗಿತು. ಲೈಂಗಿಕ ಹಕ್ಕುಗಳ ಕುರಿತು ಕೆಲಸ ಮಾಡುವ ದೆಹಲಿ ಮೂಲದ ‘ನಿರಂತರ್’ ಎಂಬ ಸಂಘಟನೆಯ ಆಸಕ್ತಿಯಿಂದ 2002ರಲ್ಲಿ ಈ ಪ್ರಯೋಗ ಅರಳಿತು. ಆಗ ಈ ಪತ್ರಿಕೆಯ ಹೆಸರು ‘ಮಹಿಳಾ ಢಾಕಿಯಾ’ (ಮಹಿಳಾ ಅಂಚೆಪೇದೆ).

ಇವತ್ತು ‘ಖಬರ್ ಲಹರಿಯಾ’ ಅಲ್ಲಿನ ಓದುಗರ ಹೃದಯದ ಪತ್ರಿಕೆಯಾಗಲು ಮುಖ್ಯ ಕಾರಣ, ಜನರಾಡುವ ಭಾಷೆಗಳಲ್ಲಿ ಇದು ಪ್ರಕಟವಾಗುವುದು. ಮೊದಲು ಬುಂದೇಲಿ ಭಾಷೆಯಲ್ಲಿ ಬಂದ ಪತ್ರಿಕೆ ಈಗ ತಳ ಸಮುದಾಯಗಳ ಐದು ಭಾಷೆಗಳಿಗೆ (ಬಜ್ಜಿಕಾ, ಅವಧಿ, ಹಿಂದೂಸ್ತಾನಿ, ಭೋಜಪುರಿ) ವಿಸ್ತರಣೆಗೊಂಡಿದೆ. ಗ್ರಾಮೀಣ ಮಹಿಳೆಯರಿಗಾಗಿಯೇ ಈ ಪತ್ರಿಕೆ ಬರುತ್ತಿದ್ದು, ಬಹಳಷ್ಟು ಕಡೆ, ಅನಕ್ಷರಸ್ಥರು ಇರುವಲ್ಲಿ ಪತ್ರಿಕೆ ವರದಿಗಾರೇ ಜನರ ಎದುರು ಪತ್ರಿಕೆಯನ್ನು ಓದಿ ವಿವರಿಸುತ್ತಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರಗಳಲ್ಲಿ 80 ಸಾವಿರ ಓದುಗರನ್ನು ಹೊಂದಿರುವ ಈ ಪತ್ರಿಕೆ ಎರಡು ವರ್ಷಗಳ ಹಿಂದೆ ತನ್ನ ಡಿಜಿಟಲ್ ಆವೃತ್ತಿಯನ್ನು ಹೊರ ತಂದು, ನಗರವಾಸಿಗಳನ್ನೂ ತಲುಪುತ್ತಿದೆ. ವಿವಿಧ ಡಿಜಿಟಲ್ ವೇದಿಕೆಗಳ ಮೂಲಕ ತಿಂಗಳಿಗೆ 50 ಲಕ್ಷ ಜನರನ್ನು ಇದು ತಲುಪುತ್ತಿದೆ.

ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ 13 ಜಿಲ್ಲೆಗಳಲ್ಲಿ 30 ವರದಿಗಾರು ಮತ್ತು ಸ್ಟಿಂಜರ್‌ಗಳನ್ನು ಹೊಂದಿರುವ ಲಹರಿಯಾ, ಗ್ರಾಮೀಣ ಸಮಸ್ಯೆಗಳು, ದುಡಿಯುವ ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುತ್ತ ಬಂದಿದೆ. ಜನಪ್ರತಿನಿಧಿಗಳು ಕುಡಿಯುವ ನೀರು, ಶೌಚಾಲಯ ವವ್ಯಸ್ಥೆ ಮಾಡಿದ್ದಾರೋ ಇಲ್ಲವೋ ಎಂಬ ಕುರಿತಾಗಿ ರಿಯಾಲಿಟಿ ಚೆಕ್ ವರದಿಗಳನ್ನು ಬರೆದು ಜನರಲ್ಲಿ ಅರಿವು ತುಂಬಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ವಿಶೇಷ ಪುರವಣಿಯನ್ನೂ ತರಲಾಗುತ್ತಿದೆ. 2018ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ‘ಯೋಗಿ ಟ್ರ್ಯಾಕರ್’ ಎಂಬ ಅಂಕಣವನ್ನೇ ಆರಂಭಿಸಲಾಗಿತು. ಗ್ರಾಮೀಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ತರಲು ‘ಮೀಟೂ’ ಚಳವಳಿಯನ್ನು ಕೂಡ ಈ ಪತ್ರಿಕೆ ನಡೆಸುತ್ತಿದೆ.

ಖಬರ್ ಲಹರಿಯಾದ ಅನನ್ಯ ಸಾಧನೆಯನ್ನು ಮೆಚ್ಚಿ ಯುನೆಸ್ಕೊ ಪ್ರಶಸ್ತಿಯನ್ನು ನೀಡಿದೆ. ಜರ್ಮನಿಯ ಚಾನೆಲ್ಲೊಂದು ಕೂಡ ಪ್ರಶಸ್ತಿ ನೀಡಿ ಗೌರವಿಸಿದೆ. ಹಲವಾರು ಗೌರವ, ಪ್ರಶಸ್ತಿ ಪಡೆದು ಮುನ್ನುಗುತ್ತಿರುವ ‘ಖಬರ್ ಲಹರಿಯಾ’ ಪ್ರಜಾಪ್ರಭುತ್ವದ ಬೆಳಕು, ಹೊಸತನದ ಅಲೆ…. ಜೊತೆಗೆ ಕನ್ನಡದ ಸ್ವತಂತ್ರ ಮಾಧ್ಯಮಗಳಿಗೆ ಮಾದರಿ.


ಇದನ್ನೂ ಓದಿ; ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...