Homeಕರ್ನಾಟಕಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್...

ಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್ ಎಚ್ಚರಿಕೆ

ಡಿಸೆಂಬರ್‌ 18 ರಿಂದ ಕರವೇ #ಕನ್ನಡವಿವಿಉಳಿಸಿ ಅಭಿಯಾನ ನಡೆಸುತ್ತಿದೆ.

- Advertisement -
- Advertisement -

ಕಳೆದ ಎರಡು ವಾರದಿಂದ #ಕನ್ನಡವಿವಿಉಳಿಸಿ ಅಭಿಯಾನದ ಮೂಲಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಚಳವಳಿಯನ್ನು ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇದೀಗ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದೆ. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರವು ಐದು ದಿನಗಳೊಳಗೆ ಆಗ್ರಹಕ್ಕೆ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿಯೆ ಪ್ರತಿಕ್ರಿಯಸಿದ್ದರು.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಸೋಮವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ರಾಜ್ಯ ಸರ್ಕಾರದ ಧೋರಣೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿ.ಎ. ನಾರಾಯಣ ಗೌಡ, “ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಚಳವಳಿಯನ್ನು ತೀವ್ರಗೊಳಿಸಲಾಗುವುದು. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿದೆ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಲಿದೆ. ಇನ್ನು ಐದು ದಿನಗಳೊಳಗೆ ರಾಜ್ಯ ಸರ್ಕಾರ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪದೇ ಪದೇ ಚಳವಳಿ‌ ಮಾಡಬೇಡಿ, ಮಾತುಕತೆಗೆ ಬನ್ನಿ, ಚಳವಳಿಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ. ಆದರೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮೇಲೂ ಮೌನವಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ರಾಜ್ಯ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದೆ. ದಪ್ಪಚರ್ಮದ ರಾಜಕಾರಣಿಗಳು, ಅಧಿಕಾರಿಗಳು ರಾಜ್ಯದ ಜನರ ಕೂಗಿಗೆ ಬೆಲೆಕೊಡುತ್ತಿಲ್ಲ. ಹೀಗಾದಲ್ಲಿ ಸಾಮಾನ್ಯ ಜನರ ಸಿಟ್ಟು ಕಟ್ಟೆಯೊಡೆದು, ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

“ಕರವೇ ನಿಯೋಗದ ಆಗ್ರಹಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿ,‌ ಕೂಡಲೇ ಹಂಪಿ ಕನ್ನಡ ವಿವಿಗೆ ಅನುದಾನ‌ ಬಿಡುಗಡೆ‌ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸರ್ಕಾರ ತನ್ನ ಮಾತು ನಡೆಸಿಕೊಳ್ಳಲಿಲ್ಲ” ಎಂದು ಅವರು ಹೇಳಿದ್ದಾರೆ.

“ಅಲ್ಲದೆ ಕರವೇ ನಾಡಿನ ವಿದ್ವಜ್ಜನರ ಹೇಳಿಕೆಗಳನ್ನು ಪಡೆದು ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ ನಡೆಸುತ್ತಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರೆಸಿದೆ. ಇಂಥ ಸಮಯದಲ್ಲಿ‌ ನಮಗೆ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ಬೇರೆ ದಾರಿ‌ ಉಳಿದಿಲ್ಲ. ಐದು ದಿನಗಳೊಳಗೆ ಸರ್ಕಾರ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಹೊರಬೇಕು” ಎಂದು ಟಿ.ಎ. ನಾರಾಯಣ ಗೌಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...