Homeಕರ್ನಾಟಕವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸಖರಾಯಪಟ್ಟಣದ ಬಳಿ ತೋಟದ ಮನೆಯಿಂದ ಸೋಮವಾರ ಸಂಜೆ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡ ಅವರು ರಾತ್ರಿಯಾದರೂ ಹಿಂತಿರುಗಲಿಲ್ಲ. ಇದರಿಂದ ಭಯಗೊಂಡ ಮನೆಯವರು ಹುಡುಕಾಡಿದ್ದಾರೆ. ಗುಣಸಾಗರ – ಕಬ್ಳಿ ಮಾರ್ಗದ ನಡುವೆ ತಡರಾತ್ರಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಜೊತೆಗೆ ಧರ್ಮೇಗೌಡ ಅವರ ಮೃತದೇಹದ ಜತೆ ಡೆತ್‌ ನೋಟ್‌ ಸಿಕ್ಕಿದೆ. ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯ ಉಲ್ಲೇಖ ಅದರಲ್ಲಿ ಇದೆ ಎಂನ್ನಲಾಗಿದೆ.

ಧರ್ಮೇಗೌಡ ಅವರು ಬೀರೂರಿನ ಪರಿಚಯಸ್ಥರೊಬ್ಬರಿಗೆ ಸೋಮವಾರ ಸಂಜೆ ಫೋನ್‌ ಮಾಡಿ ಜನ ಶತಾಬ್ಧಿ ರೈಲಿನ ಸಮಯವನ್ನು ವಿಚಾರಿಸಿದ್ದರು. ಹುಬ್ಬಳ್ಳಿಯಿಂದ ಸ್ನೇಹಿತರೊಬ್ಬರು ರೈಲಿನಲ್ಲಿ ಬರುತ್ತಿದ್ದಾರೆ ಎಂದು ಅವರಿಗೆ ತಿಳಿಸಿದ್ದರು ಎಂದು ಆಪ್ತರೊಬ್ಬರು ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ಪ್ರಜಾವಾಣಿಗೆ ತಿಳಿಸಿದ್ದರು.

ಇದನ್ನೂ ಓದಿ:  ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಇವರಿಗೆ ಸಂತಾಪ ಸೂಚಿಸಿ ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ, “ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

 


ಇದನ್ನೂ ಓದಿ: ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...