Homeಮುಖಪುಟಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

ಫೇಕುಗಳ ಕೈಯಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಎಂಬ ನಾಟಕ

- Advertisement -
- Advertisement -

| ಮಲ್ಲಿ |
ಕಾಂಗ್ರೆಸ್ಸಿನ ನೂರಾರು ಫೇಸ್‍ಬುಕ್ ಖಾತೆ, ಪುಟಗಳನ್ನು, ಬಿಜೆಪಿಯ ಕೆಲವೇ ಕೆಲವು ಖಾತೆ, ಪುಟಗಳನ್ನು ಫೇಸ್‍ಬುಕ್ ರದ್ದು ಮಾಡಿದೆ. ಫೇಕ್ ನ್ಯೂಸ್ ತಡೆಯುವುದರ ಭಾಗವಾಗಿ ಚುನಾವಣಾ ಹೊತ್ತಲ್ಲಿ ಇಂತಹ ತೋರಿಕೆಯ ಕ್ರಮ ಅದಕ್ಕೆ ಅಗತ್ಯವಾಗಿತ್ತು. ವಿಚಿತ್ರ ಎಂದರೆ ಭಾರತದಲ್ಲಿ ಅದು ಫೇಕ್‍ನ್ಯೂಸ್ ಪತ್ತೆ ಹಚ್ಚುವ ಕ್ರಮೇ ವಿರೋಧಾಭಾಸದಿಂದ ಕೂಡಿದೆ!

ಕಳ್ಳ ಚೌಕಿದಾರನ ಕೈಗೆ ಕಾಯುವ ಕೆಲಸ ಕೊಟ್ಟಂತಾಗಿದೆ. ಫೇಕು ಸುದ್ದಿಗಳನ್ನು ತಡೆಯಲೆಂದು ಫೇಸ್‍ಬುಕ್ ನೇಮಿಸಿಕೊಂಡಿರುವ ಕಂಪನಿಗಳೇ ಫೇಕು ಹರಡುವುದರಲ್ಲಿ, ಅದೂ ಬಿಜೆಪಿಗೆ ಅನುಕೂಲವಾಗುವ ಫೇಕ್ ನ್ಯೂಸ್‍ಗಳನ್ನು ಹರಡುವುದರಲ್ಲಿ ನಿರತವಾಗಿವೆ.
ಇಂಡಿಯಾಟುಡೇ, ಜಾಗರಣ್ ಮೀಡಿಯಾ ಮತ್ತು ಮೊಬೈಲ್‍ನ್ಯೂಸ್-ಈ ಮೂರು ಕಂಪನಿಗಳ ಪೋರ್ಟಲ್‍ಗಳು ಫ್ಯಾಕ್ಟ್ ಚೆಕಿಂಗ್ ಮಾಡುತ್ತಿದ್ದು ಫೇಸ್‍ಬುಕ್ ಸಹಪಾಠಿಗಳಾಗಿವೆ. ಆದರೆ ಇವೇ ಸಂಸ್ಥೆಗಳು ನಡೆಸುವ ಚಾನೆಲ್, ದಿನಪತ್ರಿಕೆ ಮತ್ತು ವೆಬ್‍ಸೈಟ್‍ಗಳು ಫೇಕು ಸುದ್ದಿಗಳನ್ನು ಪ್ರಸಾರ ಮಾಡುತ್ತವೆ. ಅಂದರೆ ಕಳ್ಳನಿಗೆ ಕಾಯುವ ಕೆಲಸವನ್ನು ಫೇಸ್‍ಬುಕ್ ನೀಡಿದೆ.

‘ಫೇಸ್‍ಬುಕ್‍ನಲ್ಲಿ ಸುಳ್ಳುಸುದ್ದಿಗಳು ಪ್ರಸಾರವಾಗದಂತೆ ತಡೆಯಲು ನಾವು ಬದ್ಧರಾಗಿದ್ದೇವೆ. 2019ರ ಚುನಾವಣೆಯ ಸಂದರ್ಭದ ಹಿನ್ನೆಲೆಯಲ್ಲಿ ನಾವು ಇನ್ನಷ್ಟು ಕ್ರಮಗಳನ್ನು ರೂಪಿಸಿದ್ದು, ಸುಳ್ಳುಸುದ್ದಿಗಳಿಗೆ, ಪ್ರಪಗಂಡಾಗಳಿಗೆ ಕಡಿವಾಣ ಹಾಕಲಿದ್ದೇವೆ….’ -ಫೇಸ್‍ಬುಕ್ ಇಂಡಿಯಾದ ಹೆಡ್ ಮನೀಷ ತಂಡೂರಿ ಕಳೆದ ತಿಂಗಳು ಹೀಗೆ ಉದ್ಘರಿಸಿದ್ದರು. ಆದರೆ ಫೇಸ್‍ಬುಕ್ ಈ ವಿಷಯದಲ್ಲಿ ಗಂಭೀರತೆಯನ್ನು ಹೊಂದಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ. ಹಿಂದೆ ಅದು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಅನುಕುಲವಾಗುವಂತೆ ವರ್ತಿಸಿದ್ದನ್ನೂ ಗಮನಿಸಿದಾಗ ಅದರ ನಡಾವಳಿಯೇ ಸಂಶಯಾತ್ಮಕ ಎನಿಸುತ್ತದೆ.

ಭಾರತದ ಫೇಸ್‍ಬುಕ್ ಅಕೌಂಟುಗಳಲ್ಲಿ ಸುಳ್ಳು ಸುದ್ದಿ ಪತ್ತೆ ಹಚ್ಚಲು, ಆ ಮೂಲಕ ಅಂತಹ ಮೂಲಗಳನ್ನು ನಿರ್ಬಂಧಿಸಲು, ಫೇಸ್‍ಬುಕ್ ಕಳೆದ ತಿಂಗಳು ಮತ್ತೆ 3 ಫ್ಯಾಕ್ಟ್-ಚೆಕಿಂಗ್ ಪೋರ್ಟಲ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡಿತು. ಅದರಲ್ಲಿ ಮೂರು ಪೋರ್ಟಲ್ ಕಂಪನಿಗಳು ಸ್ವತ: ಸುಳ್ ಸುದ್ದಿಯ ವಕ್ತಾರರೇ ಆಗಿವೆ.

ಫೇಸ್‍ಬುಕ್ ನೇಮಿಸಿಕೊಂಡಿರುವ ಅಂತಹ ಮೂರು ಪ್ರಚಂಡ ಫೇಕುದಾರ್ (ಕಳ್ಳ ಚೌಕಿದಾರ್)ಗಳು ಪುಲ್ವಾಮಾ ಘಟನೆಯ ನಂತರ ವಿಪರೀತ ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹಬ್ಬಿಸಿವೆ. ಸತ್ಯ ಗೊತ್ತಾದ ಮೇಲೂ ಅವು ವಿಷಾದಿಸಿಲ್ಲ ಕೂಡ. ಅಂದರೆ, ಸುಳ್ಳು ಎಂದು ಗೊತ್ತಿದ್ದೂ ಅವು ಈ ಕೆಲಸ ಮಾಡಿವೆ.

ಫೇಸ್‍ಬುಕ್‍ನ ಕಾಟಾಚಾರದ ಕ್ರಮ
ತನ್ನ ಬ್ರ್ಯಾಂಡ್‍ನೇಮ್ ಉಳಿಸಿಕೊಳ್ಳಲು ಫ್ಯಾಕ್ಟ್ ಚೆಕಿಂಗ್ ಮಾಡುತ್ತೇವೆ ಎನ್ನುವ ಫೇಸ್‍ಬುಕ್ ನಿಜಕ್ಕೂ ಆ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ಸುಳ್ಳೋ, ಸತ್ಯವೋ, ಅದಕ್ಕೆ ತನ್ನ ವ್ಯವಹಾರ ಕ್ಲಿಕ್ ಆಗಬೇಕಷ್ಟೇ.
ಹಿಂದೆ ಅಮೆರಿಕದಲ್ಲಿ ಫೇಸ್‍ಬುಕ್‍ನ ಫ್ಯಾಕ್ಟ್ ಚೆಕಿಂಗ್ ಪೋರ್ಟಲ್ ಆಗಿದ್ದ ‘ಸ್ನೋಪ್ಸ್’ನ ಮ್ಯಾನೇಜಿಂಗ್ ಎಡಿಟರ್ ಬ್ರೂಕ್ ಬಿನ್‍ಸೋಸ್ಕಿ ಪ್ರಕಾರ, ‘ನಮ್ಮನ್ನು ಅವರು ‘ಕ್ರೈಸಿಸ್ ಪಿ.ಆರ್. ತರಹ ಬಳಸುತ್ತಾರೆ ಅಷ್ಟೇ… ತಾವು ಫೇಕ್ ನ್ಯೂಸ್ ತಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ನಂಬಿಸಲು ಫೇಸ್‍ಬುಕ್ ಈ ನಾಟಕ ಆಡುತ್ತದೆ. ನಿಜಕ್ಕೂ ಫೇಕ್ ತಡೆಯುವಲ್ಲಿ ಅದಕ್ಕೆ ಯಾವ ಆಸಕ್ತಿಯೂ ಇಲ್ಲ….”
(ಆಧಾರ: altnews.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...