Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...