Homeಕರ್ನಾಟಕರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ - ಡಾ.ಜಿ.ವಿ.ಆನಂದಮೂರ್ತಿ ಆತಂಕ

ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು

- Advertisement -
- Advertisement -

ದೆಹಲಿಯಲ್ಲಿ ರೈತರ ಚಲನೆ ಆರಂಭವಾಗಿದ್ದರೂ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದ ವಿದ್ಯಾರ್ಥಿ-ಯುವಜನ ಸಮೂಹ ಮೌನಕ್ಕೆ ಜಾರಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿವಿಯ ಕವಿ, ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಡಾ.ಎಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಮಂಗಳವಾರ ’ಕುವೆಂಪು ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ವಿಚಾರಗಳ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕುವೆಂಪು ವಿದ್ಯಾರ್ಥಿ ಸಮೂಹವನ್ನು ಗೌರವಾನ್ವಿತ ತಪಸ್ವಿಗಳೆಂದು ಕರೆದರು. ಅಧ್ಯಯನಶೀಲತೆ, ಏಕಾಗ್ರತೆ, ಆತ್ಮಾನುಸಂಧಾನ, ಪರೀಕ್ಷೆ ಮತ್ತು ವಿಮರ್ಶೆ ಮಾಡಬೇಕು. ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕುವೆಂಪು ಹೇಳಿದರು. ಆದರೆ ಪ್ರಸಕ್ತ ದೇಶದ ವಿದ್ಯಮಾನ ಪ್ರಶ್ನಿಸುವ ಮನೋಭಾವವನ್ನೇ ಕೊಂದುಹಾಕಿದೆ. ಜಡವಾಗುವಂತೆ ಮಾಡಿದೆ.. ಎಂದು ಹೇಳಿದರು.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಕುವೆಂಪು ಅವರ ಸಮಗ್ರ ಸಾಹಿತ್ಯ ಶಾಸ್ತ್ರ-ಪುರಾಣ ಭಂಜಕವಾದುದು. ನಾಕಟ ಸಾಹಿತ್ಯ ಅಂದರೆ ಬೆರಳಿಗೆ ಕೊರಳ್, ಜಲಗಾರ ನಾಟಕಗಳಲ್ಲಿ ಕುವೆಂಪು ಅವರ ಭಂಜಕತೆ ವ್ಯಕ್ತವಾಗಿದೆ. ಧನ್ವಂತರಿ ಚಿಕಿತ್ಸೆಯಲ್ಲಿ ರೈತರ ಪರಿಸ್ಥಿತಿಯನ್ನು ಹೇಳುತ್ತಾರೆ ಕುವೆಂಪು. 80 ವರ್ಷಗಳ ಹಿಂದೆ ಬರೆದ ಸಣ್ಣಕಥೆ ಇಂದಿಗೂ ಪ್ರಸ್ತುತವಾಗಿದೆ. ರೈತನ ಎದೆಯ ಮೇಲೆ ಬೃಹತ್ ಬಂಡೆಯ ಭಾರ ಹೇರಲಾಗಿದೆ. ಹೀಗಾಗಿ ರೈತ ನರಳಾಡುವಂತೆ ಮಾಡಿದೆ. ಇಂತಹ ಹೊತ್ತಿನಲ್ಲಿ ರಾಜಕಾರಣಿಗಳು ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರೂ ಧನ್ವಂತರಿ ಚಿಕಿತ್ಸೆ ಕಥೆಯನ್ನು ಓದಿದರೆ ಅವರ ಕಲ್ಲುಮನಸ್ಸು ಕರಗಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಇಂದು ಸಮಾಜದಲ್ಲಿ ಮಾನಸಿಕ ಕ್ಷೋಭೆ ಉಂಟಾಗಿದೆ. ಸ್ವಾರ್ಥ ಚಿಂತನೆ ಹೆಚ್ಚಾಗಿದೆ. ವ್ಯಕ್ತಿಯ ವೈಭವೀಕರಣ ಮಾಡುತ್ತಿದ್ದು ಮಾನಸಿಕ ವ್ಯಸನದಿಂದ ಸಮಾಜ ನರಳುತ್ತಿದೆ. ಇದರಿಂದ ಹೊರ ಬರಲು ಕುವೆಂಪು, ಬುದ್ದನ ವಿಚಾರಗಳ ಸಹಕಾರಿಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

ಕುವೆಂಪು ವೇದಿಕೆ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಿಂದ ಹೆಚ್ಚಿನ ಶಿಕ್ಷಣ ಪಡೆಯಬೇಕು. ಬದುಕು ದೊಡ್ಡಗ್ರಂಥ. ಬುದ್ದ, ಬಸವ, ಗಾಂಧಿ ಅಂಬೇಡ್ಕರ್ ಬೆಳಕಿನ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಅಭಿಪ್ರಾಯ ಭೇದವಿತ್ತೇ ಹೊರತು ವೈಯಕ್ತಿಕ ದ್ವೇಷ ಇರಲಲ್ಲ. ಇಂದು ಇವರಿಬ್ಬರ ವಿಚಾರಗಳು ಹೆಚ್ಚು ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಬುದ್ದನ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಪ್ರಾಸ್ತಾವಿಕ ಮಾತನಾಡಿ ವ್ಯವಸ್ಥೆ ಕೊಳೆಯುತ್ತಿದೆ. ಇಂತಹ ಕೊಳೆಯನ್ನು ತೊಳೆಯಲು ಕುವೆಂಪು ವಿಚಾರಗಳಿಂದ ಸಾಧ್ಯ. ಅರಿವು ಹೆಚ್ಚಿಸಿಕೊಂಡು ನಂಬಿಕೆ, ಆಚಾರಗಳ ಕುರಿತು ಮರುವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವೈ.ಎಂ.ರೆಡ್ಡಿ, ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್ ಮಾತನಾಡಿದರು. ಡಾ. ಹೇಮಲತಾ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್ ಮಣ್ಣೆ ಸ್ವಾಗತಿಸಿದರು. ಡಾ.ರಂಗಸ್ವಾಮಿ ನಿರೂಪಿಸಿದರು. ಅಧ್ಯಾಪಕಿ ಆಶಾ ವಂದಿಸಿದರು. ಪ್ರೊ.ರಾಮಲಿಂಗು, ಅಧ್ಯಾಪಕಿ ವೀಣಾ, ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...