Homeಮುಖಪುಟನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

"ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ"

- Advertisement -
- Advertisement -

“ಉತ್ತರ ಪ್ರದೇಶ ಸರ್ಕಾರದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯು ರಾಜ್ಯವನ್ನು, ದ್ವೇಷ ರಾಜಕೀಯ, ವಿಭಜನೆ, ಧರ್ಮಾಂಧತೆಯ ಕೇಂದ್ರಬಿಂದುವಾಗಿ ಪರಿವರ್ತನೆಗೊಳಿಸಿದೆ” ಎಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಸೇರಿದಂತೆ 104 ಮಾಜಿ ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಈ ವಿವಾದಾತ್ಮಕ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಮಾಜಿ ಐಎಎಸ್ ಅಧಿಕಾರಿಗಳು, “ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ” ಎಂದಿದ್ದಾರೆ.

“ಒಂದು ಕಾಲದಲ್ಲಿ ಗಂಗಾ-ಯಮುನಾ ನಾಗರಿಕತೆಯ ತೊಟ್ಟಿಲಾಗಿದ್ದ ಉತ್ತರಪ್ರದೇಶ, ಈಗ ರಾಜಕೀಯ ದ್ವೇಷ, ವಿಭಜನೆ, ಧರ್ಮಾಂಧತೆಯ ಕೇಂದ್ರವಾಗಿದೆ. ರಾಜ್ಯಾಡಳಿತ ಕೋಮು ವಿಷವನ್ನು ಕಕ್ಕುತ್ತಿದೆ. ಉತ್ತರಪ್ರದೇಶದಾದ್ಯಂತ ಯುವ ಭಾರತೀಯರ ಮೇಲೆ ನಿಮ್ಮ ಆಡಳಿತ ಹೀನಾಯವಾಗಿ ದೌರ್ಜನ್ಯ ನಡೆಸಿದೆ. ಅಮಾಯಕ ದಂಪತಿಯನ್ನು ದಾಳಿಕೋರರು ವಿಚಾರಣೆ ನಡೆಸಿದಾಗ ಹಾಗೂ ಕಿರುಕುಳ ನೀಡಿದಾಗ ಮೂಕ ಪ್ರೇಕ್ಷಕರಾಗಿದ್ದ ಪೊಲೀಸರು ಕ್ಷಮೆಗೆ ಅರ್ಹರಲ್ಲ” ಎಂದು ಮಾಜಿ ಐಎಎಸ್ ಅಧಿಕಾರಿಗಳು ಪತ್ರದಲ್ಲಿ ಹೇಳಿದ್ದಾರೆ.

ಈ ಪತ್ರದ ಪೂರ್ಣ ಪಠ್ಯವನ್ನು ಇಲ್ಲಿ ಓದಿ.

ಇದನ್ನೂ ಓದಿ: ಕಸಗುಡಿಸುತ್ತಿದ್ದ ಕಚೇರಿಗೆ ಅಧ್ಯಕ್ಷೆಯಾಗಿ ಆಯ್ಕೆಯಾದ ಆನಂದವಳ್ಳಿ!

ಇದನ್ನೂ ಓದಿ: ಉತ್ತರ ಪ್ರದೇಶ: ಯುವಕನನ್ನು ಹಾಡಹಗಲೇ ನಡುರಸ್ತೆಯಲ್ಲಿ ಥಳಿಸಿ ಕೊಂದ ದುಷ್ಕರ್ಮಿಗಳು

ಇತ್ತೀಚೆಗೆ ರಾಜ್ಯದಲ್ಲಿ ‘ಲವ್ ಜಿಹಾದ್’ ಎನ್ನುವ ಅಸಾಂವಿಧಾನಿಕ ಪದವನ್ನು ಬಳಸಿ ಅಮಾಯಕರನ್ನು ಅದರ ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ. ಈ ಕಾನೂನನ್ನು ಹಿಂದೂ ಸಂಘಟನೆಗಳು ಸ್ವೇಚ್ಚೆಯಾಗಿ ಬಳಸಿಕೊಳ್ಳುತ್ತಿದೆ.

ಆದರೆ, ಅಲಹಾಬಾದ್ ಹೈಕೋರ್ಟ್‌ ಸೇರಿದಂತೆ ಇತರೆ ನ್ಯಾಯಾಲಯಗಳು ಈ ಕಾನೂನನ್ನು ವಿಮರ್ಶಿಸಿವೆ. ಯಾವುದೆ ಒಬ್ಬ ವಯಸ್ಕ ಯುವತಿ ತನ್ನ ಇಚ್ಚೆಗೆ ಅನುಗುಣವಾಗಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಸೇರಿದಂತೆ ನಾಲ್ವರು ಮಾಜಿ ನ್ಯಾಯಾಧೀಶರು ಈ ಸುಗ್ರೀವಾಜ್ಞೆಯನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...