Homeಕರ್ನಾಟಕಬೆಳಗಾವಿ: ಕನ್ನಡ ಧ್ವಜ ಕೆಳಗಿಳಿಸದಿದ್ದರೆ ಭಗವಾಧ್ವಜ ಹಾರಿಸುತ್ತೇವೆ ಎಂದ ಮಹಾರಾಷ್ಟ್ರ ಏಕೀಕರಣ ಸಮಿತಿ

ಬೆಳಗಾವಿ: ಕನ್ನಡ ಧ್ವಜ ಕೆಳಗಿಳಿಸದಿದ್ದರೆ ಭಗವಾಧ್ವಜ ಹಾರಿಸುತ್ತೇವೆ ಎಂದ ಮಹಾರಾಷ್ಟ್ರ ಏಕೀಕರಣ ಸಮಿತಿ

ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಛೇರಿ ಎದುರು ಸೋಮವಾರ ಕನ್ನಡಪರ ಹೋರಾಟಗಾರರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು

- Advertisement -
- Advertisement -

ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಡಿಸಂಬರ್ 31ರೊಳಗೆ ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಮಂಗಳವಾರ ನಗರ ಪೊಲೀಸ್‌ ಆಯುಕ್ತರಿಗೆ ಗಡುವು ನೀಡಿದೆ. ಆದರೆ ಇದನ್ನು ಖಂಡಿಸಿರುವ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಧ್ವಜದ ಬಳಿಯೇ ಕಾವಲು ಕಾಯುತ್ತಿದ್ದಾರೆ.

ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಸೋಮವಾರ ಕನ್ನಡಪರ ಹೋರಾಟಗಾರರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು.

ಇದನ್ನೂ ಓದಿ: ಬೆಳಗಾವಿ: ಬಸವಣ್ಣನ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಈ ಹಿಂದೆಯೂ, ಅಲ್ಲಿ ಕನ್ನಡ ಬಾವುಟ ಹಾರಿಸಿದ ಬೆನ್ನಲ್ಲೇ ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಇದೇ ರೀತಿ ಈಗಲೂ ತೆರವುಗೊಳಿಸಬಹುದೆಂಬ ಕಾರಣಕ್ಕೆ ಕನ್ನಡಪರ ಹೋರಾಟಗಾರರು ಕಂಬ ಹಾಗೂ ಬಾವುಟವನ್ನು ಕಾವಲು ಕಾಯುತ್ತಿದ್ದಾರೆ. ಕೊರೆವ ಚಳಿಯಲ್ಲೂ ರಾತ್ರಿಯಿಡೀ ಅಲ್ಲಿಯೇ ಮಲಗಿ, ಧ್ವಜಸ್ತಂಭ ತೆರವುಗೊಳಿಸಬಾರದು ಎಂದು ಒತ್ತಾಯಿಸುತ್ತಿದ್ದಾರೆ.

“ಮಹಾನಗರ ಪಾಲಿಕೆ ಕಛೇರಿ ಸೇರಿದಂತೆ, ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಛೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ–ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ. ರಾಷ್ಟ್ರಧ್ವಜದ ಎದುರು ಈ ಧ್ವಜ ಹಾರಿಸಿ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮಹಾರಾಷ್ಟ್ರ ಏಕೀಕರಣ ಯುವಸಮಿತಿಯ ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

“ಪಾಲಿಕೆ ಎದುರಿನ ಕನ್ನಡ ಬಾವುಟವನ್ನು ಡಿಸಂಬರ್ 31ರೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವು ಅಲ್ಲಿ ಭಗವಾಧ್ವಜ ಹಾರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ಪ್ರಜಾವಾಣಿ ವರದಿ ಮಾಡಿದೆ.

ಈ ಹಿಂದೆ, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು-ಸ್ಥಾಪನೆಗೆ ಸಂಬಂಧಿಸಿದಂತೆ ಇದೆ ರೀತಿಯ ಗಲಭೆ ಆರಂಭವಾಗಿತ್ತು. ಆಡಳಿತ ಮತ್ತು ವಿರೋಧ ಪಕ್ಷಗಳು ಇದರಲ್ಲೂ ತಮ್ಮ ಬೇಳೆ ಬೇಯಿಸಿಕೊಂಡಿದ್ದವು.


ಇದನ್ನೂ ಓದಿ: ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...