HomeಮುಖಪುಟJNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ- ಆರ್ಯದನ್ ಶೌಕತ್

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಆಧರಿಸಿದ ಮಲಯಾಳಂ ಚಿತ್ರ “ವರ್ತಮಾನಂ” ಸಿನಿಮಾಗೆ ಕೇಂದ್ರೀಯ ಸೆನ್ಸಾರ್ ಬೋರ್ಡ್ (CBFC) ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ. ಜೊತೆಗೆ ಚಿತ್ರತಂಡ ಮತ್ತು ನಿರ್ದೇಶಕರನ್ನು ದೇಶದ್ರೋಹಿಗಳು ಎಂದು ಸೆನ್ಸಾರ್ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದನ್ನು ವಿರೋಧಿಸಿದ ಚಿತ್ರತಂಡವು, ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್‌ ಎಂಬುವವರನ್ನು ಸೆನ್ಸಾರ್ ಮಂಡಳಿಯಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿದೆ.

ವಿ. ಸಂದೀಪ್‌ ಕುಮಾರ್‌ ಸಿನಿಮಾ ನೋಡಿದ ಬಳಿಕ ಟ್ವೀಟ್‌ ಮಾಡಿ, “ಈ ಚಿತ್ರದಲ್ಲಿ ರಾಷ್ಟ್ರ ವಿರೋಧಿ ಕಥಾವಸ್ತು ಇದೆ” ಎಂದು ಬರೆದುಕೊಂಡಿದ್ದರು. ನಂತರ ಆ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಸ್ಕ್ರೀನ್‌ ಶಾಟ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ಈ ವರ್ಷದ ಆರಂಭದಲ್ಲಿ JNU ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಒಳಗೊಂಡಿರುವ ಈ ಚಲನಚಿತ್ರವನ್ನು ಖ್ಯಾತ ಚಲನಚಿತ್ರ ನಿರ್ಮಾಪಕ ಸಿದ್ಧಾರ್ಥ್‌ ಶಿವ ನಿರ್ದೇಶಿಸಿದ್ದಾರೆ. ನಟಿ ಪಾರ್ವತಿ ತಿರುವೊತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ವಿದ್ಯಾಭ್ಯಾಸಕ್ಕಾಗಿ JNU ಗೆ ಹೋಗುವ ಕೇರಳದ ಯುವತಿಯ ಕಥೆಯನ್ನು ಒಳಗೊಂಡಿದೆ.

“ಚಿತ್ರವನ್ನು ಪರಿಷ್ಕರಣೆ ಸಮಿತಿಗೆ ಸಲ್ಲಿಸಬೇಕಾಗಿದೆ ಎಂದು ಇಲ್ಲಿನ ಸಿಬಿಎಫ್‌ಸಿ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಚಲನಚಿತ್ರಕ್ಕೆ ಪ್ರಮಾಣೀಕರಣವನ್ನು ಏಕೆ ನಿರಾಕರಿಸಲಾಗಿದೆ ಎಂದು ನಮಗೆ ಇನ್ನೂ ತಿಳಿದಿಲ್ಲ”  ಎಂದು ಹೇಳಿರುವ ಚಿತ್ರದ ನಿರ್ಮಾಪಕ ಮತ್ತು ಚಿತ್ರಕಥೆಗಾರ ಆರ್ಯದನ್ ಶೌಕತ್, ಸಂದೀಪ್ ಟ್ವೀಟ್ ಮಾಡಿರುವ ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸಂದೀಪ್ ಕುಮಾರ್ ಡಿಲೀಟ್ ಮಾಡಿರುವ ತಮ್ಮ ಟ್ವೀಟ್‌ನಲ್ಲಿ, ‘JNU ಪ್ರತಿಭಟನೆಯಲ್ಲಿ ಮುಸ್ಲಿಮರು ಮತ್ತು ದಲಿತರ ಕಿರುಕುಳ ನಡೆದಿದೆ’ ಎಂಬ ವಿಷಯದ ಪ್ರಸ್ತಾಪವಿರುವ ಕಾರಣಕ್ಕಾಗಿ ಈ ಚಲನಚಿತ್ರಕ್ಕೆ ‘ಅನುಮತಿ ನೀಡುವುದನ್ನು’ ವಿರೋಧಿಸಿದ್ದೇನೆ. ಆರ್ಯದನ್ ಶೌಕಾತ್ ಅದರ ಚಿತ್ರಕಥೆಗಾರ ಮತ್ತು ನಿರ್ಮಾಪಕರಾಗಿರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೆನ್ಸಾರ್ ಮಂಡಳಿಯಲ್ಲಿ ಹಲವಾರು ರಾಜಕೀಯ ನೇಮಕಾತಿದಾರರಿದ್ದು, ಅವರಿಗೆ ಸಿನೆಮಾ ಬಗ್ಗೆ ಕನಿಷ್ಠ ಜ್ಞಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಈ ಕುರಿತಂತೆ ಆರ್ಯದನ್ ಶೌಕತ್, “ದೆಹಲಿ ವಿವಿಯ ವಿದ್ಯಾರ್ಥಿಯೊಬ್ಬ ಪ್ರತಿಭಟನೆಯ ಬಗ್ಗೆ ಮಾತನಾಡಿದರೆ ಆತ ರಾಷ್ಟ್ರವಿರೋಧಿಯಾಗಲು ಹೇಗೆ ಸಾಧ್ಯ. ಸಂದೀಪ್ ಕುಮಾರ್ ಅವರ ಟ್ವೀಟ್‌ನಲ್ಲಿ ಎಲ್ಲವೂ ಇದೆ. JNU ನಲ್ಲಿನ ಘಟನೆಯು ದಲಿತ ಮತ್ತು ಮುಸ್ಲಿಂ ಚಿತ್ರಹಿಂಸೆಯ ವಿಷಯ ಎಂದು ಅವರೇ ಬಹಿರಂಗವಾಗಿ ಘೋಷಿಸಿದ್ದಾರೆ. ಜೊತೆಗೆ ಈ ಚಿತ್ರದ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವುದಕ್ಕೆ ಚಿತ್ರಕತೆ ಬರೆದಿರುವವರು ಮತ್ತು ಬಂಡವಾಳ ಹೂಡಿರುವ ಆರ್ಯದನ್ ಶೌಕತ್ ಅವರೇ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ, ಇದು ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾಜವಾದಿ ದೇಶವಾಗಿದೆ. ಚಿತ್ರಕಥೆ ಬರೆಯುವವರ ಕುಲ ಮತ್ತು ಜನಾಂಗವನ್ನು ಆಧರಿಸಿ ಚಲನಚಿತ್ರವೊಂದನ್ನು ಪ್ರದರ್ಶಿಸಲು ಅನುಮತಿ ನೀಡಲಾಗುತ್ತಿದೆಯೇ? ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

“ಹಾಗಾಗಿ ಈ ವಾರವೇ ‘ವರ್ತಮಾನಂ’ ಸಿನಿಮಾವನ್ನು ಮುಂಬೈನ ಪ್ರಮಾಣೀಕರಣ ಮಂಡಳಿಯ ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗುವುದು” ಎಂದು ಆರ್ಯದನ್‌ ಶೌಕತ್‌ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ JNU ಆವರಣದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಶಸ್ತ್ರಸಜ್ಜಿತವಾದ ಗುಂಪೊಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ JNU ಕ್ಯಾಂಪಸ್‌ನಲ್ಲಿ ನಡೆದ ದೃಶ್ಯಗಳನ್ನು ಈ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಂಶೋಧಕಿಯ ಪಾತ್ರದಲ್ಲಿ ಪಾರ್ವತಿ ಕಾಣಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಬಗ್ಗೆ ತಿಳಿದುಕೊಳ್ಳಲು ಜೆಎನ್‌ಯು ಕ್ಯಾಂಪಸ್‌ಗೆ ಅವರು ತೆರಳುವ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...