HomeಮುಖಪುಟJNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ- ಆರ್ಯದನ್ ಶೌಕತ್

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಆಧರಿಸಿದ ಮಲಯಾಳಂ ಚಿತ್ರ “ವರ್ತಮಾನಂ” ಸಿನಿಮಾಗೆ ಕೇಂದ್ರೀಯ ಸೆನ್ಸಾರ್ ಬೋರ್ಡ್ (CBFC) ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ. ಜೊತೆಗೆ ಚಿತ್ರತಂಡ ಮತ್ತು ನಿರ್ದೇಶಕರನ್ನು ದೇಶದ್ರೋಹಿಗಳು ಎಂದು ಸೆನ್ಸಾರ್ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದನ್ನು ವಿರೋಧಿಸಿದ ಚಿತ್ರತಂಡವು, ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್‌ ಎಂಬುವವರನ್ನು ಸೆನ್ಸಾರ್ ಮಂಡಳಿಯಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿದೆ.

ವಿ. ಸಂದೀಪ್‌ ಕುಮಾರ್‌ ಸಿನಿಮಾ ನೋಡಿದ ಬಳಿಕ ಟ್ವೀಟ್‌ ಮಾಡಿ, “ಈ ಚಿತ್ರದಲ್ಲಿ ರಾಷ್ಟ್ರ ವಿರೋಧಿ ಕಥಾವಸ್ತು ಇದೆ” ಎಂದು ಬರೆದುಕೊಂಡಿದ್ದರು. ನಂತರ ಆ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಸ್ಕ್ರೀನ್‌ ಶಾಟ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ಈ ವರ್ಷದ ಆರಂಭದಲ್ಲಿ JNU ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಒಳಗೊಂಡಿರುವ ಈ ಚಲನಚಿತ್ರವನ್ನು ಖ್ಯಾತ ಚಲನಚಿತ್ರ ನಿರ್ಮಾಪಕ ಸಿದ್ಧಾರ್ಥ್‌ ಶಿವ ನಿರ್ದೇಶಿಸಿದ್ದಾರೆ. ನಟಿ ಪಾರ್ವತಿ ತಿರುವೊತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ವಿದ್ಯಾಭ್ಯಾಸಕ್ಕಾಗಿ JNU ಗೆ ಹೋಗುವ ಕೇರಳದ ಯುವತಿಯ ಕಥೆಯನ್ನು ಒಳಗೊಂಡಿದೆ.

“ಚಿತ್ರವನ್ನು ಪರಿಷ್ಕರಣೆ ಸಮಿತಿಗೆ ಸಲ್ಲಿಸಬೇಕಾಗಿದೆ ಎಂದು ಇಲ್ಲಿನ ಸಿಬಿಎಫ್‌ಸಿ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಚಲನಚಿತ್ರಕ್ಕೆ ಪ್ರಮಾಣೀಕರಣವನ್ನು ಏಕೆ ನಿರಾಕರಿಸಲಾಗಿದೆ ಎಂದು ನಮಗೆ ಇನ್ನೂ ತಿಳಿದಿಲ್ಲ”  ಎಂದು ಹೇಳಿರುವ ಚಿತ್ರದ ನಿರ್ಮಾಪಕ ಮತ್ತು ಚಿತ್ರಕಥೆಗಾರ ಆರ್ಯದನ್ ಶೌಕತ್, ಸಂದೀಪ್ ಟ್ವೀಟ್ ಮಾಡಿರುವ ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸಂದೀಪ್ ಕುಮಾರ್ ಡಿಲೀಟ್ ಮಾಡಿರುವ ತಮ್ಮ ಟ್ವೀಟ್‌ನಲ್ಲಿ, ‘JNU ಪ್ರತಿಭಟನೆಯಲ್ಲಿ ಮುಸ್ಲಿಮರು ಮತ್ತು ದಲಿತರ ಕಿರುಕುಳ ನಡೆದಿದೆ’ ಎಂಬ ವಿಷಯದ ಪ್ರಸ್ತಾಪವಿರುವ ಕಾರಣಕ್ಕಾಗಿ ಈ ಚಲನಚಿತ್ರಕ್ಕೆ ‘ಅನುಮತಿ ನೀಡುವುದನ್ನು’ ವಿರೋಧಿಸಿದ್ದೇನೆ. ಆರ್ಯದನ್ ಶೌಕಾತ್ ಅದರ ಚಿತ್ರಕಥೆಗಾರ ಮತ್ತು ನಿರ್ಮಾಪಕರಾಗಿರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೆನ್ಸಾರ್ ಮಂಡಳಿಯಲ್ಲಿ ಹಲವಾರು ರಾಜಕೀಯ ನೇಮಕಾತಿದಾರರಿದ್ದು, ಅವರಿಗೆ ಸಿನೆಮಾ ಬಗ್ಗೆ ಕನಿಷ್ಠ ಜ್ಞಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಈ ಕುರಿತಂತೆ ಆರ್ಯದನ್ ಶೌಕತ್, “ದೆಹಲಿ ವಿವಿಯ ವಿದ್ಯಾರ್ಥಿಯೊಬ್ಬ ಪ್ರತಿಭಟನೆಯ ಬಗ್ಗೆ ಮಾತನಾಡಿದರೆ ಆತ ರಾಷ್ಟ್ರವಿರೋಧಿಯಾಗಲು ಹೇಗೆ ಸಾಧ್ಯ. ಸಂದೀಪ್ ಕುಮಾರ್ ಅವರ ಟ್ವೀಟ್‌ನಲ್ಲಿ ಎಲ್ಲವೂ ಇದೆ. JNU ನಲ್ಲಿನ ಘಟನೆಯು ದಲಿತ ಮತ್ತು ಮುಸ್ಲಿಂ ಚಿತ್ರಹಿಂಸೆಯ ವಿಷಯ ಎಂದು ಅವರೇ ಬಹಿರಂಗವಾಗಿ ಘೋಷಿಸಿದ್ದಾರೆ. ಜೊತೆಗೆ ಈ ಚಿತ್ರದ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವುದಕ್ಕೆ ಚಿತ್ರಕತೆ ಬರೆದಿರುವವರು ಮತ್ತು ಬಂಡವಾಳ ಹೂಡಿರುವ ಆರ್ಯದನ್ ಶೌಕತ್ ಅವರೇ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ, ಇದು ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾಜವಾದಿ ದೇಶವಾಗಿದೆ. ಚಿತ್ರಕಥೆ ಬರೆಯುವವರ ಕುಲ ಮತ್ತು ಜನಾಂಗವನ್ನು ಆಧರಿಸಿ ಚಲನಚಿತ್ರವೊಂದನ್ನು ಪ್ರದರ್ಶಿಸಲು ಅನುಮತಿ ನೀಡಲಾಗುತ್ತಿದೆಯೇ? ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

“ಹಾಗಾಗಿ ಈ ವಾರವೇ ‘ವರ್ತಮಾನಂ’ ಸಿನಿಮಾವನ್ನು ಮುಂಬೈನ ಪ್ರಮಾಣೀಕರಣ ಮಂಡಳಿಯ ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗುವುದು” ಎಂದು ಆರ್ಯದನ್‌ ಶೌಕತ್‌ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ JNU ಆವರಣದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಶಸ್ತ್ರಸಜ್ಜಿತವಾದ ಗುಂಪೊಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ JNU ಕ್ಯಾಂಪಸ್‌ನಲ್ಲಿ ನಡೆದ ದೃಶ್ಯಗಳನ್ನು ಈ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಂಶೋಧಕಿಯ ಪಾತ್ರದಲ್ಲಿ ಪಾರ್ವತಿ ಕಾಣಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಬಗ್ಗೆ ತಿಳಿದುಕೊಳ್ಳಲು ಜೆಎನ್‌ಯು ಕ್ಯಾಂಪಸ್‌ಗೆ ಅವರು ತೆರಳುವ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...