HomeಮುಖಪುಟJNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ- ಆರ್ಯದನ್ ಶೌಕತ್

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಆಧರಿಸಿದ ಮಲಯಾಳಂ ಚಿತ್ರ “ವರ್ತಮಾನಂ” ಸಿನಿಮಾಗೆ ಕೇಂದ್ರೀಯ ಸೆನ್ಸಾರ್ ಬೋರ್ಡ್ (CBFC) ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ. ಜೊತೆಗೆ ಚಿತ್ರತಂಡ ಮತ್ತು ನಿರ್ದೇಶಕರನ್ನು ದೇಶದ್ರೋಹಿಗಳು ಎಂದು ಸೆನ್ಸಾರ್ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದನ್ನು ವಿರೋಧಿಸಿದ ಚಿತ್ರತಂಡವು, ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್‌ ಎಂಬುವವರನ್ನು ಸೆನ್ಸಾರ್ ಮಂಡಳಿಯಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿದೆ.

ವಿ. ಸಂದೀಪ್‌ ಕುಮಾರ್‌ ಸಿನಿಮಾ ನೋಡಿದ ಬಳಿಕ ಟ್ವೀಟ್‌ ಮಾಡಿ, “ಈ ಚಿತ್ರದಲ್ಲಿ ರಾಷ್ಟ್ರ ವಿರೋಧಿ ಕಥಾವಸ್ತು ಇದೆ” ಎಂದು ಬರೆದುಕೊಂಡಿದ್ದರು. ನಂತರ ಆ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಸ್ಕ್ರೀನ್‌ ಶಾಟ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ಈ ವರ್ಷದ ಆರಂಭದಲ್ಲಿ JNU ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಒಳಗೊಂಡಿರುವ ಈ ಚಲನಚಿತ್ರವನ್ನು ಖ್ಯಾತ ಚಲನಚಿತ್ರ ನಿರ್ಮಾಪಕ ಸಿದ್ಧಾರ್ಥ್‌ ಶಿವ ನಿರ್ದೇಶಿಸಿದ್ದಾರೆ. ನಟಿ ಪಾರ್ವತಿ ತಿರುವೊತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ವಿದ್ಯಾಭ್ಯಾಸಕ್ಕಾಗಿ JNU ಗೆ ಹೋಗುವ ಕೇರಳದ ಯುವತಿಯ ಕಥೆಯನ್ನು ಒಳಗೊಂಡಿದೆ.

“ಚಿತ್ರವನ್ನು ಪರಿಷ್ಕರಣೆ ಸಮಿತಿಗೆ ಸಲ್ಲಿಸಬೇಕಾಗಿದೆ ಎಂದು ಇಲ್ಲಿನ ಸಿಬಿಎಫ್‌ಸಿ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಚಲನಚಿತ್ರಕ್ಕೆ ಪ್ರಮಾಣೀಕರಣವನ್ನು ಏಕೆ ನಿರಾಕರಿಸಲಾಗಿದೆ ಎಂದು ನಮಗೆ ಇನ್ನೂ ತಿಳಿದಿಲ್ಲ”  ಎಂದು ಹೇಳಿರುವ ಚಿತ್ರದ ನಿರ್ಮಾಪಕ ಮತ್ತು ಚಿತ್ರಕಥೆಗಾರ ಆರ್ಯದನ್ ಶೌಕತ್, ಸಂದೀಪ್ ಟ್ವೀಟ್ ಮಾಡಿರುವ ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸಂದೀಪ್ ಕುಮಾರ್ ಡಿಲೀಟ್ ಮಾಡಿರುವ ತಮ್ಮ ಟ್ವೀಟ್‌ನಲ್ಲಿ, ‘JNU ಪ್ರತಿಭಟನೆಯಲ್ಲಿ ಮುಸ್ಲಿಮರು ಮತ್ತು ದಲಿತರ ಕಿರುಕುಳ ನಡೆದಿದೆ’ ಎಂಬ ವಿಷಯದ ಪ್ರಸ್ತಾಪವಿರುವ ಕಾರಣಕ್ಕಾಗಿ ಈ ಚಲನಚಿತ್ರಕ್ಕೆ ‘ಅನುಮತಿ ನೀಡುವುದನ್ನು’ ವಿರೋಧಿಸಿದ್ದೇನೆ. ಆರ್ಯದನ್ ಶೌಕಾತ್ ಅದರ ಚಿತ್ರಕಥೆಗಾರ ಮತ್ತು ನಿರ್ಮಾಪಕರಾಗಿರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೆನ್ಸಾರ್ ಮಂಡಳಿಯಲ್ಲಿ ಹಲವಾರು ರಾಜಕೀಯ ನೇಮಕಾತಿದಾರರಿದ್ದು, ಅವರಿಗೆ ಸಿನೆಮಾ ಬಗ್ಗೆ ಕನಿಷ್ಠ ಜ್ಞಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಈ ಕುರಿತಂತೆ ಆರ್ಯದನ್ ಶೌಕತ್, “ದೆಹಲಿ ವಿವಿಯ ವಿದ್ಯಾರ್ಥಿಯೊಬ್ಬ ಪ್ರತಿಭಟನೆಯ ಬಗ್ಗೆ ಮಾತನಾಡಿದರೆ ಆತ ರಾಷ್ಟ್ರವಿರೋಧಿಯಾಗಲು ಹೇಗೆ ಸಾಧ್ಯ. ಸಂದೀಪ್ ಕುಮಾರ್ ಅವರ ಟ್ವೀಟ್‌ನಲ್ಲಿ ಎಲ್ಲವೂ ಇದೆ. JNU ನಲ್ಲಿನ ಘಟನೆಯು ದಲಿತ ಮತ್ತು ಮುಸ್ಲಿಂ ಚಿತ್ರಹಿಂಸೆಯ ವಿಷಯ ಎಂದು ಅವರೇ ಬಹಿರಂಗವಾಗಿ ಘೋಷಿಸಿದ್ದಾರೆ. ಜೊತೆಗೆ ಈ ಚಿತ್ರದ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವುದಕ್ಕೆ ಚಿತ್ರಕತೆ ಬರೆದಿರುವವರು ಮತ್ತು ಬಂಡವಾಳ ಹೂಡಿರುವ ಆರ್ಯದನ್ ಶೌಕತ್ ಅವರೇ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ, ಇದು ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾಜವಾದಿ ದೇಶವಾಗಿದೆ. ಚಿತ್ರಕಥೆ ಬರೆಯುವವರ ಕುಲ ಮತ್ತು ಜನಾಂಗವನ್ನು ಆಧರಿಸಿ ಚಲನಚಿತ್ರವೊಂದನ್ನು ಪ್ರದರ್ಶಿಸಲು ಅನುಮತಿ ನೀಡಲಾಗುತ್ತಿದೆಯೇ? ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

“ಹಾಗಾಗಿ ಈ ವಾರವೇ ‘ವರ್ತಮಾನಂ’ ಸಿನಿಮಾವನ್ನು ಮುಂಬೈನ ಪ್ರಮಾಣೀಕರಣ ಮಂಡಳಿಯ ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗುವುದು” ಎಂದು ಆರ್ಯದನ್‌ ಶೌಕತ್‌ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ JNU ಆವರಣದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಶಸ್ತ್ರಸಜ್ಜಿತವಾದ ಗುಂಪೊಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ JNU ಕ್ಯಾಂಪಸ್‌ನಲ್ಲಿ ನಡೆದ ದೃಶ್ಯಗಳನ್ನು ಈ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಂಶೋಧಕಿಯ ಪಾತ್ರದಲ್ಲಿ ಪಾರ್ವತಿ ಕಾಣಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಬಗ್ಗೆ ತಿಳಿದುಕೊಳ್ಳಲು ಜೆಎನ್‌ಯು ಕ್ಯಾಂಪಸ್‌ಗೆ ಅವರು ತೆರಳುವ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...