Homeಮುಖಪುಟಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?

ಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ಎನ್‌ಸಿಬಿ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು.

- Advertisement -
- Advertisement -

ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಾಲಿವುಡ್‌ ಡ್ರಗ್‌ ಮಾಫಿಯಾ ಪ್ರಕರಣ ಕುರಿತು ಮಾದಕವಸ್ತು ವಿರೋಧಿ ನಿಯಂತ್ರಣ ವಿಭಾಗ(ಎನ್‌ಸಿಬಿ) ತನಿಖೆ ನಡೆಸುತ್ತಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಸಚಿನ್ ಸಾವಂತ್‌, ಕಂಗನಾ ರಾಣಾವತ್‌ ಮರಳಿ ಮುಂಬೈಗೆ ಬಂದಿದ್ದಾರೆಂದು ಎನ್‌ಸಿಬಿಗೆ ನೆನಪಿಸಿದ್ದು, ನಟಿ ಈ ಹಿಂದೆ ತನಗೆ ಚಲನಚಿತ್ರೋದ್ಯಮದಲ್ಲಿನ ಡ್ರಗ್ಸ್‌ ಬಗೆಗಿನ ಮಾಹಿತಿ ಇದೆ ಎಂದು ಹೇಳುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಸಚಿನ್ ಸಾವಂತ್, ಕಂಗನಾ ಅವರನ್ನು ವಿಚಾರಣೆಗೆ ಯಾವಾಗ ಕರೆಸಿಕೊಳ್ಳುತ್ತೀರಿ ಎಂದು ಎನ್‌ಸಿಬಿಯನ್ನು ಪ್ರಶ್ನಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ಎನ್‌ಸಿಬಿ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು. ಅಲ್ಲದೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವಾರು ಜನರನ್ನು ಎನ್‌ಸಿಬಿ ಇದುವರೆಗೂ ವಿಚಾರಣೆಗೆ ಕರೆಸಿಕೊಂಡಿದೆ. ಸಚಿನ್ ಸಾವಂತ್‌ ಟ್ವೀಟ್ ಮಾಡಿರುವ ವಿಡಿಯೋ ಈ ಹಿಂದೆಯೆ ವೈರಲ್ ಆಗಿತ್ತು. ಅದರಲ್ಲಿ ನಟಿ ಕಂಗನಾ ರಾಣಾವತ್‌ ತಾನು “ಮಾದಕ ವ್ಯಸನಿ” ಆಗಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಸಚಿನ್ ಸಾವಂತ್‌ ತನ್ನ ಟ್ವೀಟ್‌ನಲ್ಲಿ, “ಆತ್ಮೀಯ ಎನ್‌ಸಿಬಿ, ಕಂಗನಾ ರಾಣಾವತ್‌ ಬಂದಿದ್ದಾರೆ. ಈ ವಿಡಿಯೋಗಾಗಿ ಅವರನ್ನು ನೀವು ಯಾವಾಗ ವಿಚಾರಣೆ ನಡೆಸುತ್ತೀರಿ?. ಬಾಲಿವುಡ್‌ನಲ್ಲಿರುವ ಡ್ರಗ್‌ ಮಾಫಿಯಾದ ಬಗ್ಗೆ ಮಾಹಿತಿ ನೀಡುತ್ತೇನೆ ಎಂದಾಗ ಮೋದಿ ಸರ್ಕಾರ ಅವರಿಗೆ ವೈ ಕೆಟಗಿರಿಯ ಭದ್ರತೆ ನೀಡಿತು. ಅದನ್ನು ಕಂಗನಾ ಇನ್ನೂ ಅನುಭವಿಸುತ್ತಿದ್ದಾರೆ. ಆದರೆ ಅವರು ಅಪರಾಧದ ಮಾಹಿತಿಯನ್ನು ಈಗಲೂ ಮರೆ ಮಾಚುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿ ಕಂಗಾನಾರನ್ನು ಝಾನ್ಸಿಯ ರಾಣಿ ಎಂದು ಕರೆದು, ಮಹಾರಾಷ್ಟ್ರ ಸರ್ಕಾರ ಅವರು ಪೊಲೀಸರಿಗೆ ಮಾಹಿತಿ ನೀಡಲು ಬಿಡುತ್ತಿಲ್ಲ ಎಂದು ಆರೋಪಿಸಿತ್ತು. ಈಗ ಅವರು ಆ ಮಾಹಿತಿಯನ್ನು ಎನ್‌ಸಿಬೆಗೆ ಮಾಹಿತಿ ನೀಡಲು ವಿನಂತಿಸುತ್ತಾರೆಯೆ? ಮಹಾರಾಷ್ಟ್ರವನ್ನು ದೂಷಿಸಿದ್ದಕ್ಕಾಗಿ ಬಿಜೆಪಿ ಕ್ಷಮೆಯಾಚಿಸುತ್ತದೆಯೆ?” ಎಂದು ಸಚಿನ್ ಸಾವಂತ್‌ ಪ್ರಶ್ನಿಸಿದ್ದಾರೆ.

ಕಂಗನಾ ರಾಣಾವತ್‌, ತಾನು ಮುಂಬೈಗೆ ಮರಳಿ ಮುಂಬಾ ದೇವಿ ಹಾಗೂ ಸಿದ್ದಿ ವಿನಾಯಕ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದನ್ನು ಫೋಟೋ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...