Homeಅಂಕಣಗಳುರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು... ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು... ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್.

- Advertisement -
- Advertisement -

ದೆಹಲಿ ಗಡಿಗಳ ರೈತ ಪ್ರತಿಭಟನೆಯ ಬೆನ್ನುಮೂಳೆ ಪಂಜಾಬಿನ ರೈತರು. ಆರ್ಥಿಕವಾಗಿ ಬಹುತೇಕ ಬಲಾಢ್ಯರು. ಮೋದಿ-ಶಾ ಅವರಂತಹ ಪ್ರಚಂಡ ಜೋಡಿಗೆ ಸವಾಲೆಸೆದು ನೆಲಕಚ್ಚಿ ನಿಂತು ವರ್ಷಗಳ ಹೋರಾಟಕ್ಕೆ ತಯಾರೆಂದು ತೊಡೆ ತಟ್ಟಿರುವವರು. ಇವರ ಈ ಧಾರಣಾ ಶಕ್ತಿಯ ಬೆನ್ನುಮೂಳೆಯ ಹಿಂದೆ, ದಲಿತ ಕೂಲಿ ಕಾರ್ಮಿಕರ ಬೆವರಿದೆ.

’ಹೊಲಗಳೇ ಇಲ್ದಿದ್ರೆ ನಮ್ಮಂಥ ಕೂಲಿ ಮಾಡೋರು ಹೊಟ್ಟೆ ಬಟ್ಟೆಗೆ ಏನ್ಮಾಡಬೇಕು… ರೈತನಿಗೆ ನಷ್ಟ ಆದ್ರೆ ನಮ್ಗೆ ಕೂಲಿ ಹೆಂಗೆ ಕೊಟ್ಟಾನು… ಈ ಹೋರಾಟಾನ ನಾವು ಒಗ್ಗಟ್ಟಾಗಿ ಮಾಡ್ಬೇಕು’ ಎನ್ನುತ್ತಾರೆ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆಗಳಲ್ಲಿ ಭಾಗವಹಿಸಿರುವ ಕೃಷಿ ಕೂಲಿ ಕಾರ್ಮಿಕ ದೇವ್‌ಸಿಂಗ್. ’ತಾಸಿಗೆ ಮೂರು ರುಪಾಯಿ ಕೂಲಿ ಕೊಡ್ತಿದ್ರು. ಈಗ ದಿನಕ್ಕೆ 300 ರುಪಾಯಿ. ಕನಿಷ್ಠ ಪಕ್ಷ ಹನ್ನೆರಡು ತಾಸು ದುಡೀತೀವಿ’ ಎನ್ನುತ್ತಾರೆ ಅವರು. ಫಾಜಿಲ್ಕಾ ಜಿಲ್ಲೆಯ ದೇವ್ ಸಿಂಗ್ ಅವರ ವಯಸ್ಸು 65. ಇಬ್ಬರು ಮಕ್ಕಳು. ಅವರೂ ಕೂಲಿ ಆಳುಗಳು. ಮಜಹಬಿ ಸಿಖ್ ಎಂದು ಕರೆಯಲಾಗುವ ದಲಿತನೀತ. ಪಂಜಾಬಿನ ಬಹುತೇಕ ಕೃಷಿ ಕೂಲಿ ಕಾರ್ಮಿಕರು ದಲಿತರು.

ಪಂಜಾಬಿನ ಸಮೃದ್ಧ ಸುಗ್ಗಿಗಳ ಹಿಂದೆ ಈ ಶ್ರಮಜೀವಿಗಳು ಬಸಿದ ಬೆವರೇ ಬಂಗಾರ. ರೈತರ ದನಗಳನ್ನು ಮೇಯಿಸುವುದರಿಂದ ಹಿಡಿದು, ಉಳುಮೆ, ಬಿತ್ತನೆ, ಕಟಾವು, ಒಕ್ಕುವುದೇ ಮುಂತಾದ ರೈತ ಕುಟುಂಬವೊಂದರ ಎಲ್ಲ ಕೆಲಸಗಳನ್ನೂ ಮಾಡುವವರು ಇವರು.

ಹರಿಯಾಣ-ದೆಹಲಿ ಗಡಿ ಪ್ರದೇಶದ ರೋಹ್ತಕ್ ಹೆದ್ದಾರಿಯಲ್ಲಿ ಮೈಲುಗಳುದ್ದಕ್ಕೆ ಟ್ರ್ಯಾಕ್ಟರು- ಟ್ರಾಲಿಗಳಲ್ಲಿ ಬೀಡುಬಿಟ್ಟಿರುವ ತಮ್ಮ ರೈತ ಧಣಿಗಳ ಜೊತೆಗೆ ಕೃಷಿ ಕೂಲಿಕಾರರೂ ದೊಡ್ಡ ಸಂಖ್ಯೆಯಲ್ಲಿ ಕೈಜೋಡಿಸಿ ನೆರವಾಗಿದ್ದಾರೆ.

ಕೂಲಿ ಮಾಡಿ ನಾಲ್ವರು ಸದಸ್ಯರ ಕುಟುಂಬವನ್ನು ಸಲಹುವ ಹೆಣ್ಣುಮಗಳು ತಾಝಾ ಬೇಗಮ್. ಲಕ್ವಾ ಬಡಿದು 14 ವರ್ಷಗಳ ಹಿಂದೆ ಕಾಲು ಕಳೆದುಕೊಂಡ ಗಂಡ. ಜಡ್ಡು ಜಾಪತ್ತು ಮದುವೆ ಮುಂಜಿಗಳಿಗೆ ದುಡ್ಡು ಬೇಕೆಂದರೆ ಧಣಿಯ ಮುಂದೆ ಕೈ ಚಾಚಬೇಕು. ಕೊಟ್ಟರೆ ಉಂಟು, ಕೊಡದಿದ್ದರೆ ಇಲ್ಲ. ಬೇಗಮ್‌ಳ ಪತಿ ತೋತಾ ಖಾನ್ ಲಕ್ವ ಹೊಡೆವ ಮುನ್ನ ಜಮೀನುದಾರನೊಬ್ಬನ ಬಳಿ 32 ವರ್ಷಗಳ ಕಾಲ ದುಡಿದಿದ್ದ. ಮುಲಾಜಿಲ್ಲದೆ ಆತನನ್ನು ಹೊರದಬ್ಬಿದ್ದ ಧಣಿ. ಬರಬೇಕಿದ್ದ ಹಳೆಯ ಬಾಕಿಯನ್ನೂ ಕೊಡಲಿಲ್ಲ.

ಈ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಅಂದು ದುಡಿದು ಅಂದು ಉಣ್ಣಬೇಕಿರುವ ದುರ್ಗತಿಯಲ್ಲಿ ಬದುಕುತ್ತಿರುವವರು. ಅವರ ಜೀವನೋಪಾಯಕ್ಕೆ ಸಂಚಕಾರ ಬಂದಿದೆಯೆಂದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಭೂಮಿಗಾಗಿ ದಲಿತರು ನಡೆಸಿರುವ ಹೋರಾಟದಲ್ಲಿ ಜಮೀನುದಾರರೊಂದಿಗೆ ಮುಖಾಮುಖಿಯಾಗಿರುವುದು ಹೌದು. ಈ ಮುಖಾಮುಖಿಗಳು ಹಿಂಸೆಗೆ ತಿರುಗಿರುವುದೂ ಉಂಟು. ಸಾಮಾಜಿಕ ಬಹಿಷ್ಕಾರವನ್ನೂ ದಲಿತ ಕೂಲಿಕಾರರು ಎದುರಿಸಿರುವುದೂ ನಿಜ. ದಲಿತ ಕೂಲಿಕಾರ ಸಂಘಗಳು ಭೂಮಿಹೀನ ದಲಿತರ ಬೆನ್ನಿಗೆ ನಿಂತಿವೆ. ಆದರೆ ಹೊಸ ಕೃಷಿ ಕಾನೂನುಗಳನ್ನು ಒಗ್ಗಟ್ಟಿನಿಂದ ಎದುರಿಸುವ ಅಗತ್ಯವನ್ನು ಈ ಸಂಘಗಳು ಮನಗಂಡಿವೆ. ಹೀಗಾಗಿ ಅವರೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ ಎನ್ನುತ್ತಾರೆ ಸಾಕ್ಷ್ಯಚಿತ್ರ ನಿರ್ಮಾಪಕ ರಣದೀಪ್ ಮದ್ದೊಕೆ. ಮದ್ದೊಕೆ ಖುದ್ದು ಭೂಮಿಹೀನ ದಲಿತ ಕುಟುಂಬದಿಂದ ಬಂದವರು.

PC : OpIndia

ಪಂಜಾಬಿನ ಭೂಮಿಹೀನ ಬಡವರ ಕಷ್ಟ ಕಣ್ಣೀರುಗಳ ಕುರಿತು ಮದ್ದೊಕೆ ನಿರ್ಮಿಸಿರುವ ಸಾಕ್ಷ್ಯಚಿತ್ರ ‘Landle’ ಧಗಧಗಿಸುವ ಸತ್ಯವನ್ನು ಅನಾವರಣಗೊಳಿಸುತ್ತದೆ.

ದೇಶದಲ್ಲಿ ಅತಿಹೆಚ್ಚು ಶೇಕಡವಾರು ದಲಿತರನ್ನು ಹೊಂದಿರುವ ರಾಜ್ಯ ಪಂಜಾಬ್ ಎಂಬ ಸಂಗತಿ ಬಹಳ ಮಂದಿಗೆ ತಿಳಿದಿರಲಾರದು. 2011ನೆಯ ಜನಗಣತಿ ಪ್ರಕಾರ ಈ ರಾಜ್ಯದ ಜನರ ಪೈಕಿ ದಲಿತರ ಪ್ರಮಾಣ ಶೇ.31.94ರಷ್ಟು. ಕಳೆದ ಒಂಭತ್ತು ವರ್ಷಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಿದ್ದೀತೇ ವಿನಾ ಕಮ್ಮಿಯಾಗಿರುವುದಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿದ್ದರೂ ರಾಜ್ಯಾಧಿಕಾರ ಇವರಿಗೆ ದಕ್ಕಿಲ್ಲ. ನಾನಾ ಜಾತಿಗಳು ಮತ್ತು ಒಳಪಂಗಡಗಳಲ್ಲಿ ಹಂಚಿಹೋಗಿರುವ ದಲಿತರಿಗೆ ಅಧಿಕಾರ ಹಗಲುಗನಸು. ಮುಖ್ಯಮಂತ್ರಿ ಹುದ್ದೆ ಎಂದಿದ್ದರೂ ಶೇ.20ರಷ್ಟಿರುವ ಜಾಟ್ ಸಿಖ್ಖರ ಪಾಲು.

ಮುಕ್ಕಾಲು ಪಾಲು ದಲಿತರು ಗ್ರಾಮೀಣವಾಸಿಗಳು. ಜಾಟ್ ಸಿಖ್ಖರ ಹೊಲಗದ್ದೆಗಳಲ್ಲಿ ಕೂಲಿ ಮಾಡಿ ಅನ್ನ ಸಂಪಾದಿಸುವವರು. ಕೃಷಿಗೆ ಯಂತ್ರಗಳು ಕಾಲಿಟ್ಟ ನಂತರ ಈ ಕೂಲಿ ಕೆಲಸವೂ ಕೈತಪ್ಪಿದೆ. ಜಮೀನಿನ ಒಡೆತನ ಇವರ ಪಾಲಿಗೆ ಗಗನಕುಸುಮ. ಮಲ ಬಳಿವ ದಲಿತರ ಸಂಖ್ಯೆಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಂಜಾಬಿನದು. ದಲಿತರ ಮೇಲೆ ದಮನ ದೌರ್ಜನ್ಯಗಳು ನಿರಂತರ.

ಪಂಜಾಬಿನಲ್ಲಿ ಕೂಡ ದಲಿತರ ಕೇರಿಗಳು ಊರಿನ ಅಂಚಿಗಿರುತ್ತವೆ. ಪಶ್ಚಿಮ ದಿಕ್ಕಿಗಿರುವುದು ವಾಡಿಕೆ. ಮುಂಜಾನೆಯ ಸೂರ್ಯನ ಕಿರಣಗಳು ಮೇಲ್ಜಾತಿಗಳ ಕೇರಿಗಳ ಮೇಲೆ ಬೀಳುವ ಮುನ್ನ ಅಸ್ಪೃಶ್ಯರ ಹಟ್ಟಿಗಳನ್ನು ತಾಕಿ ಮೈಲಿಗೆ ಆಗದಂತೆ ವಹಿಸಿರುವ ಎಚ್ಚರಿಕೆ. ಚರಂಡಿಯ ರೊಜ್ಜು ಕೂಡ ಪೂರ್ವದ ಎತ್ತರದಿಂದ ಪಶ್ಚಿಮದ ತಗ್ಗಿನುದ್ದಕ್ಕೆ ಚಾಚಿ ಹರಿಯಬೇಕು.

ಇಂತಹ ಅಸೀಮ ತಾರತಮ್ಯದ ಬಲಿಪಶುಗಳು ತಮ್ಮ ಶೋಷಕನನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗೆಯನ್ನು ಏನೆಂದು ಬಣ್ಣಿಸಲು ಬಂದೀತು?


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...