HomeಮುಖಪುಟRJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಮಂಗಳವಾರ ಹೇಳಿದ್ದರು

- Advertisement -
- Advertisement -

JDU ಪಕ್ಷದ 17 ಶಾಸಕರು ತಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, ಈಗ ಇನ್ನೊಂದು ಸ್ಫೋಟಕ ಮಾಹಿತಿಯನ್ನು ನೀಡಿದ್ದಾರೆ. “ತಮ್ಮ ಪಕ್ಷಕ್ಕೆ ಬರುವ ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೆ ಏರಲಿದೆ” ಎಂದು ಹೇಳಿದ್ದಾರೆ.

ಈ ಕುರಿತು ಆರ್‌ಜೆಡಿ ಮುಖಂಡರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು , “17 JDU ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಯಾವುದೇ ಸಮಯದಲ್ಲಿ ನಮ್ಮ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ. ಆದರೆ ಪಕ್ಷಾಂತರ ನಿಷೇಧ ಕಾನೂನನ್ನು ಉಲ್ಲಂಘಿಸಲು ನಾವು ಬಯಸುವುದಿಲ್ಲವಾದ್ದರಿಂದ, ಅವರು 28 ಶಾಸಕರ ಗುಂಪಿನಲ್ಲಿ ಬಂದಾಗ ಮಾತ್ರ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ. ಅವರ ಸಂಖ್ಯೆ ಶೀಘ್ರದಲ್ಲೇ 28 ಕ್ಕೆ ಏರಲಿದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ಬಿಹಾರದ ಆಡಳಿತಾರೂಢ ಪಕ್ಷ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಪಕ್ಷಾಂತರದ ಕಾವನ್ನು ಅನುಭವಿಸಿದ ಬೆನ್ನಲ್ಲೇ, ರಾಜ್ಯದ ವಿರೋಧ ಪಕ್ಷದ ಆರ್‌ಜೆಡಿ ಮುಖಂಡ ಶ್ಯಾಂ ರಾಜಕ್, “17 ಜೆಡಿಯು ಶಾಸಕರು ಆರ್‌ಜೆಡಿಯೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದರು.

“ಜೆಡಿಯು ಪಕ್ಷದೊಳಗೆ ಮತ್ತು ಪಕ್ಷದ ವ್ಯವಹಾರಗಳ ಹಿಡಿತದಲ್ಲಿ ನಿತೀಶ್ ಕುಮಾರ್ ಅವರ ನಿರಂಕುಶಾಧಿಕಾರಿ ವರ್ತನೆ ಅಲ್ಲಿನ ಬಹುಪಾಲು ಶಾಸಕರಿಗೆ ಕಿರಿಕಿರಿಯನ್ನುಂಟು ಮಾಡಿದೆ. ನಿತೀಶ್ ಕುಮಾರ್ ತಮ್ಮ ರಾಜಕೀಯ ಚಿತ್ರಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ” ಎಂದು ವಿಧಾನಸಭಾ ಚುನಾವಣೆಗೆ ಮೊದಲು ನಿತೀಶ್ ಕುಮಾರ್ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿದ್ದ ಶಯಂ ರಾಜಕ್ ಆರೋಪಿಸಿದ್ದಾರೆ.

“ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಶೀಘ್ರದಲ್ಲೇ ಬೀಳಲಿದೆ. ಮಿತ್ರಪಕ್ಷಗಳ ನಡುವೆ ಅಸಮಾಧಾನ ಹೆಚ್ಚುತ್ತಿದೆ. ಆಡಳಿತದಲ್ಲಿ ಪ್ರಾಬಲ್ಯ ಸಾಧಿಸಲು ಬಿಜೆಪಿ ಮತ್ತು ಜೆಡಿಯು ನಡುವೆ ಹೆಚ್ಚುತ್ತಿರುವ ಹೋರಾಟದಿಂದಾಗಿ ಈಗ ಇದು ಅನಿವಾರ್ಯವಾಗುತ್ತಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಉಪಸಭಾಪತಿ ಧರ್ಮೇಗೌಡರನ್ನು ಕೊಂದವರಾರು?!

“ಜನವರಿ 14 ರ ನಂತರ ಜೆಡಿಯು ತನ್ನ 17 ಶಾಸಕರ ಮತ್ತೊಂದು ಪಕ್ಷಾಂತರವನ್ನು ಎದುರಿಸಬೇಕಾಗಬಹುದು. ಏಕೆಂದರೆ ನಿತೀಶ್ ಕುಮಾರ್ ತಮ್ಮ ಪಕ್ಷವನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಇತ್ತೀಚೆಗೆ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಹಾಗಾಗಿ ಆರ್‌ಜೆಡಿ ಮುಖಂಡರ ಈ ಹೇಳಿಕೆ ನಿತೀಶ್ ಕುಮಾರ್ ಅವರಿಗೆ ಮತ್ತೊಂದು ಆಘಾತ ನೀಡಿದೆ.


ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ – ಯಾರಿಗೆ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...