Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...